24.9 C
ಪುತ್ತೂರು, ಬೆಳ್ತಂಗಡಿ
April 10, 2025
Uncategorized

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ – ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ರಾಮನವಮಿ ಉತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

ಮದ್ದಡ್ಕ: ಶ್ರೀರಾಮ ಸೇವಾ ಸಮಿತಿ ಮದ್ದಡ್ಕ ಮತ್ತು ವಿಶ್ವ ಹಿಂದೂ ಪರಿಷತ್ ಭಜರಂಗಧಳ ಮದ್ದಡ್ಕ ಇದರ ಆಶ್ರಯದಲ್ಲಿ ಎ.6 ರoದು ರಾಮನವಮಿ ಉತ್ಸವದ ಪ್ರಯುಕ್ತ ಸೂರ್ಯೋದಯದಿಂದ ಸೂರ್ಯಾಸ್ತಮಾನ ವರೆಗೆ ಜರಗುವ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಶ್ರೀರಾಮ ಭಜನಾ ಮಂದಿರದಲ್ಲಿ ಗಣ ಹೋಮ ವೈದಿಕ ವಿಧಿ ವಿಧಾನಗಳನ್ನು ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಎಂ. ರಘುರಾಮ್ ಭಟ್ ಮಠ ನೆರವೇರಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ, ರತ್ನಾಕರ ಭಟ್ ವೇದಾಶ್ರಯ ಸರಪಾಡಿ ಮದ್ದಡ್ಕ, ಹೊನ್ನಪ್ಪ ಕುಲಾಲ್ ಅಧ್ಯಕ್ಷರು ಸಹಪರಿವಾರ ಶ್ರೀ ಸಾಸ್ತಾರ ದೇವಸ್ಥಾನ ಮಾಣೂರು, ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಶ್ರೀರಾಮ ಸೇವಾ ಸಮಿತಿಯ ಗೌರವಾಧ್ಯಕ್ಷ ರಾಜಪ್ರಕಾಶ್ ಪಡ್ಡೈಲು, ಅಧ್ಯಕ್ಷ ಮನೋಹರ್ ಕೇದಳಿಕೆ, ಉಪಾಧ್ಯಕ್ಷ ಗಣೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶ ಪ್ರೀತಮ್ ಆಚಾರ್ಯ, ಕೋಶಾಧಿಕಾರಿ ಸಚಿನ್ ವರ್ಧನ್ ಸಬರಬೈಲು, ಗಣೇಶ್ ಶೆಟ್ಟಿ ಅರ್ಕಜೆ ಅಧ್ಯಕ್ಷರು ವಿಶ್ವ ಹಿಂದೂ ಪರಿಷತ್ ಮದ್ದಡ್ಕ, ಕಾರ್ಯದರ್ಶಿ ವಿನೋದ್ ಶೆಣೈ ಮದ್ದಡ್ಕ, ಯಶೋಧರ ಶೆಟ್ಟಿ ಸಂಚಾಲಕರು ಭಜರಂಗದಳ ಮದ್ದಡ್ಕ ಹಾಗೂ ಶ್ರೀರಾಮ ಸೇವಾ ಸಮಿತಿ ಮದ್ದಡ್ಕ, ಭಜರಂಗದಳ ಮದ್ದಡ್ಕ, ವಿಶ್ವ ಹಿಂದು ಪರಿಷತ್ ಮದ್ದಡ್ಕ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ನಾಳೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವಪ್ರಶಸ್ತಿಗೆ ಜನಪದ ಕ್ಷೇತ್ರದಲ್ಲಿ ಉದಯಕುಮಾರ ಲಾಯಿಲ ಆಯ್ಕೆ

Suddi Udaya

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya
error: Content is protected !!