23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

ನಾರಾವಿ: ಕುತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ಬೆಳೆಸಿದ ಹಣ್ಣು ತರಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಶಾಲೆಯ ವಿದ್ಯಾರ್ಥಿಗಳನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಇಂದು ಯುವ ನಾಯಕ ರಕ್ಷಿತ್ ಶಿವರಾಂ ಅವರು ಭೇಟಿ ಮಾಡಿಸಿದರು.

ಮಕ್ಕಳು ಕಲಿಕೆಯ ಜೊತೆ ಕೃಷಿಯ ಬಗ್ಗೆ ಸ್ವಲ್ಪಮಟ್ಟಿಗೆ ಜ್ಞಾನ, ಆಸಕ್ತಿ ಬೆಳೆಸಿಕೊಂಡಿರುವುದು ಭಾರತದಂಥ ಕೃಷಿ ಪ್ರಧಾನ ರಾಷ್ಟ್ರದಲ್ಲಿ ಉತ್ತಮ‌ ಅಭ್ಯಾಸ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳೊಂದಿಗೆ ತನ್ನ ಬಾಲ್ಯವನ್ನೂ ಕೂಡ ಮೆಲುಕು ಹಾಕಿದ ಸಿದ್ದರಾಮಯ್ಯನವರು, ನಾನೂ ಬಾಲ್ಯದಲ್ಲಿ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದಲೇ ರಾಜ್ಯದ ರೈತರ ಕಷ್ಟ ಸುಖಗಳನ್ನು ಅರಿಯಲು ಸಾಧ್ಯವಾಗಿದೆ ಎಂದರು. ಮಕ್ಕಳ ಶ್ರಮವನ್ನು ಶ್ಲಾಘಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ,ಮಕ್ಕಳ ಕೃಷಿಕಾರ್ಯಕ್ಕೆ ಬೆಂಬಲವಾಗಿ ನಿಂತ ಶಾಲೆಗೆ ಎರಡು ಕಂಪ್ಯೂಟರ್‌ಗಳನ್ನು ಉಡುಗೊರೆಯಾಗಿ ಕೂಡ ನೀಡಿದರು.

ಮುಖ್ಯಮಂತ್ರಿಗಳ ಭೇಟಿಯ ವೇಳೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಯುವ ನಾಯಕ ರಕ್ಷಿತ್ ಶಿವರಾಮ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು,ಶಾಲಾ ಸಿಬ್ಬಂದಿ ವರ್ಗದವರು, ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಭಟ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟಣ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ಉದ್ಯಮಿ ಪ್ರವೀಣ್ ಹಳ್ಳಿ ಮನೆ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya
error: Content is protected !!