July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

ಉರುವಾಲು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಉರುವಾಲು ವಿಭಾಗ ಇದರ ಸಹಕಾರದೊಂದಿಗೆ
ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ,ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ, ಜನಜಾಗೃತಿ ಗ್ರಾಮ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ನವಜೀವನ ಸಮಿತಿ ಕೊರಿಂಜ, ಇವುಗಳ ಸಂಯುಕ್ತ ಆಶ್ರಯದಲ್ಲಿ 44ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ 5 ನೇ ವರ್ಷದ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವು ಕೊರಿಂಜ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಇವರ ಅಧ್ಯಕ್ಷತೆಯಲ್ಲಿ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.

ಜ್ಞಾನೇಶ್ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಭಜನಾ ಮಂಡಳಿಯ ಕೋಶಾಧಿಕಾರಿ ಸೀತಾರಾಮ ಆಳ್ವ ಕೊರಿಂಜ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವೇದಿಕೆಯಲ್ಲಿ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪದ್ಮುಂಜ ಸಿ.ಎ ಬ್ಯಾಂಕ್ ನ ನಿರ್ದೇಶಕರಾದ ಶ್ರೀಮತಿ ಶಾರದ ಆರ್ ರೈ, ಕಣಿಯೂರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪ್ರಪುಲ್ಲ ಚಂದ್ರ ಅಡ್ಯಂತಾಯ, ಕಣಿಯೂರು ವಲಯದ ಮೇಲ್ವಿಚಾರಕಿ ಕು| ಶಿಲ್ಪ, ಭಜನಾ ಮಂಡಳಿ ಗೌರವಾಧ್ಯಕ್ಷ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.

ಮೈರೋಳ್ತಡ್ಕ ಶಾಲೆಯ ಸಹಶಿಕ್ಷಕರಾದ ಮಾಧವ ಗೌಡ ಕಾರ್ಯಕ್ರಮದ ನಿರೂಪಿಸಿ, ಕೃಷ್ಣಪ್ಪ ನಾಯ್ಕ ಕಲ್ಲಂಡ ಧನ್ಯವಾದವಿತ್ತರು.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya
error: Content is protected !!