22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನಗೊಳಿಸಿದ್ದಾರೆಂದು ಆರೋಪಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ರಾಜು ಶೆಟ್ಟಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಉಜಿರೆ ಓಡಲ ನಿವಾಸಿ ಅಜಯ್ ಕುಮಾರ್ ಪಿ.ಕೆ ಅವರು ಇಂದು ಸಂಜೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಎ. 7 ರಂದು ಸಾಮಾಜಿಕ ಜಾಲತಾಣದಲ್ಲಿ ಒಂದು ಆಡಿಯೋ ಸಂಭಾಷಣೆಯ ತುಣುಕು ಹರಿದಾಡುತ್ತಿದ್ದು, ಆಡಿಯೋದಲ್ಲಿ ಕೇಳಿ ಬರುತ್ತಿರುವ ಸ್ವರವನ್ನು ಆಳಿಸಿದಾಗ ಚಿರಪರಿಚಿತ ಸ್ವರವಾಗಿದ್ದು, ಇದು ಮಹೇಶ್ ಶೆಟ್ಟಿ ತಿಮರೋಡಿ ಮತ್ತು ರಾಜು ಶೆಟ್ಟಿ ಇವರ ಸಂಭಾಷಣೆಯ ಸ್ವರವಾಗಿರುತ್ತದೆ. ಆಡಿಯೋದಲ್ಲಿ ಜೈನರನ್ನು ಹಾಗೂ ಜೈನ ಧರ್ಮವನ್ನು ಅತ್ಯಂತ ಅವಹೇಳನಕಾರಿಯಾಗಿ ಇಬ್ಬರು ಮಾತಾನಾಡಿದ್ದು ಜೈನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ.

ಈ ಅಡಿಯೋದಲ್ಲಿ “ ದುಡ್ಡು ಹಿಂದುಲೇನನೆ ಜೈನೆರೆನ ಅತ್ತತ್ತ, ದುಡ್ಡು ಹಿಂದುಲೆನನೆ ದುರುಪಯೋಗ ಮಲ್ಪರ ಅಕುಲು ಆಂಡಲಾ ನಮ್ಮಕ್ಕುಲೆಗು ಗೊತ್ತಾಪುಜಿ ನನಲಾ ಅವು ಬೇಜಾರ್ ಮುಲುಲ ಅಂಚನೆ ಉಂಡು ನಮ್ಮ ಅಜಿಲ ಸೀಮೆಲ ಅಂಚನೆ ಉಂಡು ಮೊಕುಲೆನ್ ಬುಳೆವರೇ ಬುಡಿಯಾರೇ ಬಲ್ಲಿ ನೆಟ್ ಪೆಟ್ ತಿಂದೆಂರ್ಡ ಅಡೆಗ್ ಜೈನೆರರ್ನ ಆಡಳಿತ ಮುಗಿಯಿಂಡ್ ಈ ಜೈನೆರೆಗ್ ಅವೊಂಜಿ ಸುಪ್ರಿಂ ಕೋರ್ಟ್ ” ಎಂದು ಹೇಳಿರುವುದಲ್ಲದೆ, ಜೈನರಿಗೆ ಅವ್ಯಾಚ್ಯ ಶಬ್ಧಗಳಿಂದ ಬೈದು ಜೈನ ಜಾತಿಯನ್ನು ನಿಂದಿಸಿರುತ್ತಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂಭಾಷಣೆಯನ್ನು ಆಲಿಸಿದಾಗ ಚಿರಪರಿಚಿತ ಸ್ವರಗಳಾದ, ಉಜಿರೆಯ ಕುಂಜರ್ಪ ಎಂಬಲ್ಲಿಯ ನಿವಾಸಿಯಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು, ಬಡಗಕಾರಂದೂರು ರಾಜು ಶೆಟ್ಟಿ ಇವರದ್ದಾಗಿರುತ್ತದೆ. ಫೋನಿನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ರಾಜು ಶೆಟ್ಟಿ ಇವರು ಮಾತಾನಾಡಿದ ಸಂಭಾಷಣೆಯ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಜೈನ ಜಾತಿಗೆ ಅಪಮಾನ ಹಾಗೂ ಜೈನ ಧರ್ಮದ ಬಗ್ಗೆ ನಿಂದಿಸಿ ಸಮಾಜದ ಅಶಾಂತಿಗೆ ಕಾರಣವಾಗಿದೆ ಎಂದು ದೂರಿನಲ್ಲಿ ಅಪಾದೀಸಲಾಗಿದೆ.

ಜೈನರ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡಿ ಆಘಾತವನ್ನುಂಟು ಮಾಡುವ ಉದ್ದೇಶದಿಂದ ದ್ವೇಷ ಭಾವನೆಯಿಂದ ಕೃತ್ಯವನ್ನು ಮಾಡಿದ್ದು, ಇವರಿಬ್ಬರ ವಿರುದ್ಧ, ಮೇಲೆ ಮೇಲಿನ ಅಪರಾಧಕ್ಕಾಗಿ ಹಾಗೂ ತಮ್ಮ ತನಿಖೆಯ ವೇಳೆ ಕಂಡು ಬರುವ ಎಲ್ಲಾ ರೀತಿಯ ಅಪರಾಧಕ್ಕಾಗಿ ಸೂಕ್ತ ಪ್ರಕರಣ ದಾಖಲಿಸಿ, ನ್ಯಾಯ ಒದಗಿಸಿ ಕೊಡಬೇಕಾಗಿ ಒತ್ತಾಯಿಸಿದ್ದಾರೆ. ಮನವಿ ನೀಡುವ ಸಂದರ್ಭದಲ್ಲಿ ಜೈನ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಗೆಲ್ಲು: ಶಾಕ್ ತಗಲಿ ಕಾರ್ಮಿಕ ಚನನ ಗೌಡ ಮೃತ್ಯು

Suddi Udaya
error: Content is protected !!