26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀಧ.ಮಂ.ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ 2024-25 ನೇ ಸಾಲಿನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಳದ ಖರ್ಚು ಉಗ್ರಾಣದ ಪ್ರಬಂಧಕ ಪುಷ್ಪರಾಜ ಶೆಟ್ಟಿ , ಬಾವಂತಬೆಟ್ಟು ಆಗಮಿಸಿ ಮಾತನಾಡಿ ಬೇಸಿಗೆ ಶಿಬಿರದಲ್ಲಿ ಮೂರು ದಿನಗಳ ಕಾಲ ನಡೆದ ಎಲ್ಲಾ ತರಬೇತಿಗಳ ಉತ್ತಮ ಅಂಶಗಳನ್ನು ತಮ್ಮ ಮುಂದಿನ ಜೀವನದಲ್ಲಿ ಅಳವಡಿಸಿಕೊಂಡು ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಸತ್ಪ್ರಜೆಗಳಾಗಿ ಬೆಳೆಯಬೇಕು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು .

ಬೇಸಿಗೆ ಶಿಬಿರದ ಸಂಪನ್ಮೂಲ ವ್ಯಕ್ತಿ ಉಜಿರೆ ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಹಶಿಕ್ಷಕರು ಕೂಸಪ್ಪ ಗೌಡ ಮಾತನಾಡಿ .ವಿದ್ಯಾರ್ಥಿಗಳು ಮೊಬೈಲ್ , ಸಾಮಾಜಿಕ ಜಾಲತಾಣಗಳಲ್ಲಿ ತಲ್ಲೀನರಾಗಿ ತಮ್ಮ ಬಾಲ್ಯವನ್ನು ವ್ಯರ್ಥ ಮಾಡದೆ ಗ್ರಾಮೀಣ ಆಟಗಳನ್ನು ಆಡುವುದು. ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮುಂತಾದವುಗಳ ಮೂಲಕ ತಮ್ಮ ಬಾಲ್ಯವನ್ನು ಅರ್ಥಪೂರ್ಣವಾಗಿ ಕಳೆಯಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪಗೌಡ ಮಾತನಾಡಿ ಮೂರು ದಿನದ ಬೇಸಿಗೆ ಶಿಬಿರದ ಚಟುವಟಿಕೆಗಳನ್ನು ನೆನಪಿಸಿ ಎಲ್ಲಾ ಚಟುವಟಿಕೆಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಶಿಬಿರವನ್ನು ಅರ್ಥಪೂರ್ಣವಾಗಿಸಬೇಕು ಎಂಬ ಕಿವಿ ಮಾತನ್ನು ಹೇಳಿದರು.

ಪವನ್ ಕುಮಾರ್ ಸ್ವಾಗತಿಸಿ, ಶ್ರೀಮತಿ ಶೀಲಾ ಎನ್. ಧನ್ಯವಾದವಿತ್ತರು. ಕುಮಾರಿ ಜಿತೀಕ್ಷ ಕಾರ್ಯಕ್ರಮ ನಿರೂಪಿಸಿದರು. ಮೂರು ದಿನಗಳ ಕಾಲ ನಡೆದ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಜಾನಪದ ಗೀತೆ ಗೀಗಿ ಪದಗಳು , ಜಾನಪದ ನೃತ್ಯ ತೆಂಗಿನ ಗರಿ ಗಳಿಂದ ವಿವಿಧ ಕಲಾ ಕೃತಿಗಳ ರಚನೆ, ಡ್ರಾಯಿಂಗ್ ಶೀಟ್ ಮತ್ತು ಪೇಪರ್ ನಿಂದ ವಿವಿಧ ರೀತಿಯ ಮಾದರಿಗಳ ರಚನೆ ಮುಂತಾದ ತರಬೇತಿಗಳನ್ನು ವಿವಿಧ ಸಂಪನ್ಮೂಲ ವ್ಯಕ್ತಿಗಳು ನೀಡಿದರು. ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಪಾತಾಳ ವೆಂಕಟರಮಣ ಭಟ್ಟರಿಗೆ ಕುರಿಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!