24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆ ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

2017 ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.

ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಪ್ರವೀಣ್ ನೆಟ್ವಾರ್ ಹತ್ಯೆ ಪ್ರಕರಣದಲ್ಲಿ ಎರಡು ವರ್ಷದ ಹಿಂದೆ ಎನ್.ಐ.ಎ ಬಂಧಿಸಿ ನ್ಯಾಯಾಂಗ ಬಂಧನಲ್ಲಿರಿಸಲಾಗಿದೆ. ಈ ವರೆಗೂ ಜಾಮೀನು ಮಂಜೂರಾಗಿಲ್ಲ.

ಕೋರ್ಟ್ ಗೆ ಹಾಜರು ಪಡಿಸಿದ ಅವರನ್ನು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು.

Related posts

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಪದಾಧಿಕಾರಿಗಳ ಆಯ್ಕೆ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya
error: Content is protected !!