24.2 C
ಪುತ್ತೂರು, ಬೆಳ್ತಂಗಡಿ
May 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

ಉರುವಾಲು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಉರುವಾಲು ವಿಭಾಗ ಇದರ ಸಹಕಾರದೊಂದಿಗೆ
ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ,ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ, ಜನಜಾಗೃತಿ ಗ್ರಾಮ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ನವಜೀವನ ಸಮಿತಿ ಕೊರಿಂಜ, ಇವುಗಳ ಸಂಯುಕ್ತ ಆಶ್ರಯದಲ್ಲಿ 44ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ 5 ನೇ ವರ್ಷದ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವು ಕೊರಿಂಜ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಇವರ ಅಧ್ಯಕ್ಷತೆಯಲ್ಲಿ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.

ಜ್ಞಾನೇಶ್ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಭಜನಾ ಮಂಡಳಿಯ ಕೋಶಾಧಿಕಾರಿ ಸೀತಾರಾಮ ಆಳ್ವ ಕೊರಿಂಜ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವೇದಿಕೆಯಲ್ಲಿ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪದ್ಮುಂಜ ಸಿ.ಎ ಬ್ಯಾಂಕ್ ನ ನಿರ್ದೇಶಕರಾದ ಶ್ರೀಮತಿ ಶಾರದ ಆರ್ ರೈ, ಕಣಿಯೂರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪ್ರಪುಲ್ಲ ಚಂದ್ರ ಅಡ್ಯಂತಾಯ, ಕಣಿಯೂರು ವಲಯದ ಮೇಲ್ವಿಚಾರಕಿ ಕು| ಶಿಲ್ಪ, ಭಜನಾ ಮಂಡಳಿ ಗೌರವಾಧ್ಯಕ್ಷ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.

ಮೈರೋಳ್ತಡ್ಕ ಶಾಲೆಯ ಸಹಶಿಕ್ಷಕರಾದ ಮಾಧವ ಗೌಡ ಕಾರ್ಯಕ್ರಮದ ನಿರೂಪಿಸಿ, ಕೃಷ್ಣಪ್ಪ ನಾಯ್ಕ ಕಲ್ಲಂಡ ಧನ್ಯವಾದವಿತ್ತರು.

Related posts

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!