23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

ಉರುವಾಲು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಉರುವಾಲು ವಿಭಾಗ ಇದರ ಸಹಕಾರದೊಂದಿಗೆ
ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ,ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ, ಜನಜಾಗೃತಿ ಗ್ರಾಮ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ನವಜೀವನ ಸಮಿತಿ ಕೊರಿಂಜ, ಇವುಗಳ ಸಂಯುಕ್ತ ಆಶ್ರಯದಲ್ಲಿ 44ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ 5 ನೇ ವರ್ಷದ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವು ಕೊರಿಂಜ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಇವರ ಅಧ್ಯಕ್ಷತೆಯಲ್ಲಿ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.

ಜ್ಞಾನೇಶ್ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಭಜನಾ ಮಂಡಳಿಯ ಕೋಶಾಧಿಕಾರಿ ಸೀತಾರಾಮ ಆಳ್ವ ಕೊರಿಂಜ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವೇದಿಕೆಯಲ್ಲಿ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪದ್ಮುಂಜ ಸಿ.ಎ ಬ್ಯಾಂಕ್ ನ ನಿರ್ದೇಶಕರಾದ ಶ್ರೀಮತಿ ಶಾರದ ಆರ್ ರೈ, ಕಣಿಯೂರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪ್ರಪುಲ್ಲ ಚಂದ್ರ ಅಡ್ಯಂತಾಯ, ಕಣಿಯೂರು ವಲಯದ ಮೇಲ್ವಿಚಾರಕಿ ಕು| ಶಿಲ್ಪ, ಭಜನಾ ಮಂಡಳಿ ಗೌರವಾಧ್ಯಕ್ಷ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.

ಮೈರೋಳ್ತಡ್ಕ ಶಾಲೆಯ ಸಹಶಿಕ್ಷಕರಾದ ಮಾಧವ ಗೌಡ ಕಾರ್ಯಕ್ರಮದ ನಿರೂಪಿಸಿ, ಕೃಷ್ಣಪ್ಪ ನಾಯ್ಕ ಕಲ್ಲಂಡ ಧನ್ಯವಾದವಿತ್ತರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya
error: Content is protected !!