September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.9: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ ಮಂಗಳೂರಿನಲ್ಲಿ ಏಪ್ರಿಲ್ 9ರಂದು ಮಧ್ಯಾಹ್ನ 3ಗಂಟೆಗೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತಿಳಿಸಿದರು.

ಅವರು ಎ.7 ರಂದು ಬೆಳ್ತಂಗಡಿ ಪ್ರವಾಸ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ಕಾರಣಕ್ಕೆ ಆಗಿರುವ ಮಿತಿಮೀರಿದ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರ, ಹದಗೆಟ್ಟ ಕಾನೂನು ವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ನೀತಿಯನ್ನು ಪ್ರತಿಭಟಿಸುವ ಈ ಯಾತ್ರೆಯಲ್ಲಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಕರ್ನಾಟಕದ ಇತಿಹಾಸದಲ್ಲಿ ಹಿಂದೆಂದೂ ಕಂಡರಿದ ಮಟ್ಟಕ್ಕೆ ಬಡವರ ಬದುಕಿಗೆ ಬೆಂಕಿ ಇಡುವ ಬೆಲೆ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಹಾಲಿನ ದರ, ಮದ್ಯದ ದರ, ಮೆಟ್ರೋ ದರ, ಕಾಲೇಜು ಪ್ರವೇಶ ಶುಲ್ಕ, ಬಿತ್ತನೆ ಬೀಜ ದರ, ಪೆಟ್ರೋಲ್‌-ಡೀಸೆಲ್‌ ದರ, ಬಸ್ ದರ, ಸ್ಟ್ಯಾಂಪ್ ದರ ಏರಿಕೆಯಾಗಿದೆ. ಈಗ ಕಸದಿಂದಲೂ ದುಡ್ಡು ಹೊಡೆಯಲಾಗುತ್ತಿದೆ. ಬೆಂಗಳೂರಿನ ಜನರು ಕಸಕ್ಕೂ ಶುಲ್ಕ ನೀಡಬೇಕಾಗಿದೆ. ಇದರಿಂದಲೇ ಒಂದೂವರೆ ಕೋಟಿ ರೂ. ಲೂಟಿ ಮಾಡಲಾಗುತ್ತಿದೆ. ಬೆಳಿಗ್ಗೆ ಎದ್ದು ಸರಕಾರ ಇವತ್ತು ಯಾವುದರ ದರ ಏರಿಸುತ್ತಾರೋ ಎಂಬ ಆತಂಕದ ಸ್ಥಿತಿಯಲ್ಲಿ ಜನ ಬದುಕುವಂತಾಗಿದೆ.

ಕಾಂಗ್ರೆಸ್‌ ಜಾತ್ಯತೀತವಾದಿ ಎಂದು ಹೇಳಿಕೊಂಡು ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಸರ್ಕಾರಿ ಗುತ್ತಿಗೆಯಲ್ಲಿ ಧರ್ಮಾಧಾರಿತವಾದ ಮೀಸಲು ಸಂವಿಧಾನದ ನೀತಿಯ ವಿರುದ್ಧ ಕೊಡುವ ಅಗತ್ಯವಿರಲಿಲ್ಲ. ಈಗಾಗಲೇ ಹೆಚ್ಚಿನ ಗುತ್ತಿಗೆಯನ್ನು ಮುಸ್ಲಿಮರೇ ಮಾಡುತ್ತಿದ್ದಾರೆ. ಇದರ ವಿರುದ್ಧ ಹೋರಾಟ ಮಾಡಲಾಗುತ್ತದೆ. ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಡೆತ್‌ನೋಟ್‌ ಗಿಂತ ಹೆಚ್ಚಿನ ಸಾಕ್ಷಿ ಬೇಡವೆಂದು ಇವರೇ ಹೇಳುತ್ತಿದ್ದರು. ವಿನಯ್‌ ಅವರ ಡೆತ್‌ನೋಟ್‌ ಪರಿಗಣಿಸುತ್ತಲೇ ಇಲ್ಲ. ಈ ಹಿಂದೆ ಬಿಜೆಪಿ ಅವಧಿಯಲ್ಲಿ ಈಶ್ವರಪ್ಪನವರ ವಿಚಾರದಲ್ಲಿ ಇವರೇ ಹೋರಾಟ ಮಾಡಿದ್ದರು. ಈಗ ಉಲ್ಟಾ ಮಾತಾಡುತ್ತಿದ್ದಾರೆ. ವಾಟ್ಸ್ ಅಪ್ ಗ್ರೂಪ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಥವಾ ಶಾಸಕರ ವಿರುದ್ಧ ಸಂದೇಶ ಹಾಕಿದರೆ ಅವರ ವಿರುದ್ಧ ಪೊಲೀಸ್ ದೂರು ದಾಖಲಿಸಲಾಗುತ್ತಿದೆ. ಇದು ದೊಡ್ಡ ದಂಧೆಯಾಗಿ ಬೆಳೆದಿದೆ. ಸರ್ಕಾರದ ವಿರುದ್ಧ ಪ್ರತಿಭಟಿಸಿದರೆ ಆಗಲೂ ದೂರು ದಾಖಲಿಸುತ್ತಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಗರ ಬಿಜೆಪಿ ಅಧ್ಯಕ್ಷ ರಾಜೇಶ್ ಪ್ರಭು, ಕಾರ್ಯದರ್ಶಿ ಶರತ್ ಉಪಸ್ಥಿತರಿದ್ದರು.

ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya

ಧರ್ಮಸ್ಥಳ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಸೇವೆ

Suddi Udaya

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya
error: Content is protected !!