September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸರಕಾರವು ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ 4500 ಕೋಟಿ ರೂ. ಅನುದಾನ ಬಿಡುಗಡೆ ಮತ್ತು ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವ ಕುರಿತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ

ಬೆಳ್ತಂಗಡಿ : ಕರ್ನಾಟಕ ಸರಕಾರವು ಇತ್ತಿಚೇಗೆ ತನ್ನ ಬಜೆಟ್ ದಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6000 ರೂಪಾಯಿ ವೇತನ, ಮುಸಲ್ಮಾನ ಹೆಣ್ಣುಮಕ್ಕಳ ಮದುವೆಗೆ 50 ಸಾವಿರ ರೂಪಾಯಿ, ಮುಸಲ್ಮಾನ ವಿದ್ಯಾರ್ಥಿಗಳ ವಿದೇಶೀ ಶಿಷ್ಯವೇತನಕ್ಕೆ 30 ಲಕ್ಷ ರೂ., ಮುಸಲ್ಮಾನ ಹೆಣ್ಣುಮಕ್ಕಳಿಗೆ ಆತ್ಮ ರಕ್ಷಣೆ ತರಬೇತಿ, ವಕ್ಸ್ ಬೋರ್ಡ ಆಸ್ತಿ ರಕ್ಷಣೆಗೆ 150 ಕೋಟಿ ರೂ. ಅನುದಾನ, ಮುಸಲ್ಮಾನರು ಬಹುಸಂಖ್ಯಾತರಿರುವ ಪ್ರದೇಶದಲ್ಲಿ ಐಟಿಐ ಕಾಲೇಜಿಗೆ ಮಂಜೂರಾತಿ, 100 ಉರ್ದುಶಾಲೆಗಳ ಸ್ಥಾಪನೆ, ಮುಸಲ್ಮಾನ ಯುವಕರ ಸ್ಟಾರ್ಟ ಆಪ್ ಗೆ ಸರಕಾರೀ ಸಹಾಯಧನ, ಮುಸಲ್ಮಾನ ಮಕ್ಕಳಿಗೆ ವೃತ್ತಿಪರ ತರಬೇತಿ, ಹಜ್ ಭವನಕ್ಕೆ ಅನುದಾನ. ಹೀಗೆ ಸರಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನೆಪದಲ್ಲಿ 4500 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಅದಲ್ಲದೆ ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ, ಸರಕಾರವು ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ. ಆದರಿಂದ ಮೀಸಲಾತಿಯನ್ನು ರದ್ದು ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಪ ತಹಸೀಲ್ದಾರರಾದ ಜಯ ಇವರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ತಲುಪಿಸಲಾಯಿತು.

ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ 34 ಸಾವಿರ ಸೀ ಗ್ರೇಡ್ ದೇವಸ್ಥಾನಗಳ ಅರ್ಚಕರಿಗೆ ಯಾವುದೇ ಸಂಬಳ ಇಲ್ಲ. ಆದರೆ ಇಮಾಮ್‌ರಿಗೆ 6 ಸಾವಿರ ರೂಪಾಯಿ ಅನುದಾನ ನೀಡಲಾಗಿದೆ. ಅದಲ್ಲದೇ ಧಾರ್ಮಿಕ ದತ್ತಿ ಇಲಾಖೆಯ ಸೀ ಗ್ರೇಡ್ ನ ಸಾವಿರಾರು ದೇವಸ್ಥಾನಗಳು ಜೀರ್ಣೋದ್ದಾರ, ಸುಣ್ಣ ಬಣ್ಣ ಇಲ್ಲದೇ ಶಿಥಿಲಾವಸ್ಥೆಗೆ ತಲುಪಿವೆ. ಆದರೆ ಪ್ರಾಚೀನ ದೇವಸ್ಥಾನಗಳ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ ಯಾವುದೇ ಅನುದಾನವಿಲ್ಲ. ಹೀಗೆ ಸರಕಾರವು ಸಾರ್ವಜನಿಕರ ತೆರಿಗೆ ಹಣವನ್ನು ಕೇವಲ ಒಂದೇ ಸಮುದಾಯದ ಅಭಿವೃದ್ಧಿಗೆ ವಿನಿಯೋಗಿಸುವುದು ಭಾರತದ ಸಂವಿಧಾನದ ಕಲಂ 14, 15 ರ ಉಲ್ಲಂಘನೆಯಾಗಿದೆ. ಹಾಗಾಗಿ ಸರಕಾರದ ಈ ವರ್ಷದ ಹಣಕಾಸು ವಿಧೇಯಕಕ್ಕೆ ಅನುಮೋದನೆ ನೀಡಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಧರ್ಮ ಪ್ರೇಮಿಗಳಾದ ನಾರಾಯಣ ಪಡ್ಕೆ ಮುಂಡಾಜೆ, ಜಯ ಸಾಲಿಯಾನ್ ಬಲೆಂಜ, ವಾಮನ್ ಬಾಳಿಗ ವೇಣೂರು, ರಾಘವೇಂದ್ರ ಕಾಮತ್ ಉಜಿರೆ, ಸಂತೋಷ್ ಕುಮಾರ್ ಪೆರಿಯಡ್ಕ, ಕೇಶವ ಅಚ್ಚಿನಡ್ಕ, ಶಿವರಾಮ್ ಉಜಿರೆ, ವಿಜ್ಞೇಶ್ ಆಚಾರ್ಯ ಬೆಳ್ತಂಗಡಿ, ಕೇಶವ ಭಟ್ ಅತ್ತಾಜೆ, ಉಮೇಶ್ ಬಂಗೇರ ಪಿಲ್ಯ, ಶಿವರಾಮ ಉಜಿರೆ, ಯೋಗೀಶ್ ಕೆಂಬರ್ಜಿ, ಕರುಣಾಕರ ಅಬ್ಯಂಕರ ಸೋಮಂತಡ್ಕ, ಹಿಂದೂ ಜನಜಾಗೃತಿ ಸಮಿತಿಯ ಹರೀಶ ಕಕ್ಕಿಂಜೆ ಉಪಸ್ಥಿತರಿದ್ದರು.

Related posts

ಜನರ ಹಕ್ಕುಗಳನ್ನು ಖಾತ್ರಿ ಪಡಿಸದೆ ಭೌತಿಕ ಸರ್ವೆ ಮಾಡದೆ ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ಹೊರಡಿಸಿರುವುದು ಆತಂಕಕಾರಿ ಬೆಳವಣಿಗೆ: ಹರೀಶ್ ಎಳನೀರ್

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ದಿಗ್ವಿಜಯ ಬೆಳ್ತಂಗಡಿ ಬಿಜೆಪಿ ಕಾರ್ಯಕರ್ತರಿಂದ ಗೆಲುವಿನ ಸಂಭ್ರಮಾಚರಣೆ

Suddi Udaya
error: Content is protected !!