ಬೆಳ್ತಂಗಡಿ: ಬೆಳ್ತಂಗಡಿ ತಾಲೂಕೂ ವ್ಯಾಪ್ತಿಗೆ ಒಳಪಡುವ ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.
ಸಾಮಾನ್ಯ ವರ್ಗದಿಂದ ಅರುಣ್ ಭಟ್ ಮತ್ತಿಲ, ಪರಿಶಿಷ್ಟ ಜಾತಿ ವರ್ಗದಿಂದ ಓಬಯ್ಯ ನಲ್ಕೆ , ಮಹಿಳೆ ಶ್ರೀಮತಿ ಗೀತಾ ನೇಮಕವಾಗಿದ್ದಾರೆ.