September 6, 2026
ಅಪರಾಧ ಸುದ್ದಿ

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಮುತ್ತಿಟ್ಟ ಯುವಕ

ಬೆಳ್ತಂಗಡಿ : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಪೊಲೀಸರೇ ಎದುರೇ ಯುವಕ ಮುತ್ತಿಟ್ಟ ಘಟನೆ ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಇಂದು ನಡೆದಿದೆ.

ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಕೋರ್ಟ್ ಗೆ ಬಾಡಿ ವಾರೆಂಟ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಕರೆ ತರಲಾಗಿತ್ತು. ಈ ವೇಳೆ ಯುವಕನೊಬ್ಬ ಪೊಲೀಸರ ಎದುರೇ ಶಾಫಿ ಹಣೆಗೆ ಮುತ್ತಿಕ್ಕಿದ್ದಾನೆ.

ಇಂದು ಶಾಫಿ ಬೆಳ್ಳಾರೆಯನ್ನು ಪೊಲೀಸರು ಕರೆ ತರುವ ಬಗ್ಗೆ ಗೊತ್ತಿದ್ದ ಕಾರಣ ಶಾಫಿ ಬೆಳ್ಳಾರೆ ನೋಡಲು ಆತನ ಸ್ನೇಹಿತರು ಬಂದಿದ್ದರು.ಅದರಲ್ಲಿ ಒಬ್ಬ ಆತನ ಹಣೆಗೆ ಮುತ್ತಿಕ್ಕಿದ್ದಾನೆ ಎಂದು ವರದಿಯಾಗಿದೆ.

Related posts

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ವೇಣೂರಿನಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya
error: Content is protected !!