July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

ಮಂಗಳೂರು: ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ಮಹಿಳೆಯೊಬ್ಬರನ್ನು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಎಂದು ಮಹಿಳೆ ನೀಡಿದ ದೂರಿನ ಆರೋಪದಲ್ಲಿ ಗುರುವಾಯನಕೆರೆ ನಿವಾಸಿ, ಕೂಳೂರಿನಲ್ಲಿ ಉಸ್ತಾದ್ ಆಗಿರುವ ಜಿ. ಅಬ್ದುಲ್ ಕರೀಮ್ ಎಂಬಾತನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಎ.6 ರಂದು ಬಂಧಿಸಿದ್ದಾರೆ.

2022ರಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲಿ, ಆಕೆ ತನ್ನ ಸಂಬಂಧಿಯ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಅಬ್ದುಲ್ ಕರೀಮ್ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ. ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ. ಅನಂತರ ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದ. ಮಹಿಳೆ ತನ್ನ ಅಕ್ಕನ ಜತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಆತ ಕೆಲವು ಬಾರಿ ಮಹಿಳೆಗೆ ಕುರಾನ್ ಓದಿಸಿದ್ದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.


2022ರ ಫೆ. 10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿ ಮನೆಗೆ ಹೋಗಿದ್ದು, ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರಾನ್ ಓದಿಸಿ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದ ಎಂದು ಅಪಾದಿಸಲಾಗಿದೆ. ಅಲ್ಲದೆ ಮಹಿಳೆಯಿಂದ 55 ಸಾವಿರ ರೂ. ಪಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಒಟ್ಟು ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನ ಜೈನ ಬಾಂಧವರಿಂದ ಬೆಳ್ತಂಗಡಿಯಿಂದ ಧಮ೯ಸ್ಥಳಕ್ಕೆ ಬೃಹತ್ ವಾಹನ ಜಾಥಾ ಧರ್ಮಸ್ಥಳದೊಂದಿಗೆ ಹಾಗೂ ಡಾ. ಹೆಗ್ಗಡೆಯವರೊಂದಿಗೆ ನಾವಿದ್ದೇವೆ. ಪುಣ್ಯ ಕ್ಷೇತ್ರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಘೋಷಣೆ ಸತ್ಯಕ್ಕೆ ಯಾವತ್ತು ಜಯ ಇದೆ ಅದು ಹೊರ ಬರುತ್ತದೆ: ಡಾ.ಹೆಗ್ಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಗೆ “ಜೊತೆಯಾಗಿ ಭವಿಷ್ಯವನ್ನು ಕಟ್ಟೋಣ” ಕಾರ್ಯಕ್ರಮ

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಎಲ್‌.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!