September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

ಮಂಗಳೂರು: ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ಮಹಿಳೆಯೊಬ್ಬರನ್ನು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಎಂದು ಮಹಿಳೆ ನೀಡಿದ ದೂರಿನ ಆರೋಪದಲ್ಲಿ ಗುರುವಾಯನಕೆರೆ ನಿವಾಸಿ, ಕೂಳೂರಿನಲ್ಲಿ ಉಸ್ತಾದ್ ಆಗಿರುವ ಜಿ. ಅಬ್ದುಲ್ ಕರೀಮ್ ಎಂಬಾತನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಎ.6 ರಂದು ಬಂಧಿಸಿದ್ದಾರೆ.

2022ರಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲಿ, ಆಕೆ ತನ್ನ ಸಂಬಂಧಿಯ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಅಬ್ದುಲ್ ಕರೀಮ್ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ. ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ. ಅನಂತರ ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದ. ಮಹಿಳೆ ತನ್ನ ಅಕ್ಕನ ಜತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಆತ ಕೆಲವು ಬಾರಿ ಮಹಿಳೆಗೆ ಕುರಾನ್ ಓದಿಸಿದ್ದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.


2022ರ ಫೆ. 10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿ ಮನೆಗೆ ಹೋಗಿದ್ದು, ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರಾನ್ ಓದಿಸಿ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದ ಎಂದು ಅಪಾದಿಸಲಾಗಿದೆ. ಅಲ್ಲದೆ ಮಹಿಳೆಯಿಂದ 55 ಸಾವಿರ ರೂ. ಪಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಒಟ್ಟು ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Related posts

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya
error: Content is protected !!