23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

ಬೆಳಾಲು : ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು(ಎ.7) ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ ಮನೆಯಲ್ಲಿ ಸುತ್ತ ಮುತ್ತ ಮಣ್ಣಿನ ಮಡಿಕೆ, ಪಾತ್ರೆ ಗಳಲ್ಲಿ ಜಲದ ವ್ಯವಸ್ಥೆಯನ್ನು ಕಲ್ಪಿಸಿ ಪಕ್ಷಿ ಸಂಕುಲಗಳ ಜೀವ ಉಳಿಸೋಣ ಎನ್ನುವ ಸಂಕಲ್ಪದಂತೆ, ಅತಿ ಹೆಚ್ಚು ನೀರನ್ನು ಹಾಳು ಮಾಡದಂತೆ ಸದಸ್ಯರಿಗೆ ಮಾಹಿತಿ ನೀಡಿ ಪಕ್ಷಿ ಸಂಕುಲಗಳಿಗೆ ಜೀವಜಲದ ವ್ಯವಸ್ಥೆ ಮಾಡಲಾಯಿತು.


ಈ ಸಂದರ್ಭದಲ್ಲಿ ಲೆಕ್ಕ ಪರಿಶೋಧಕರಾದ ನವೀನ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಒಕ್ಕೂಟದ ಅಧ್ಯಕ್ಷರಾದ ಗಂಗಾಧರ್ ಸಾಲ್ಯಾನ್, ಒಕ್ಕೂಟದ ಪದಾಧಿಕಾರಿಗಳು, ಹಿರಿಯ ನವಜೀವನ ಸದಸ್ಯ ಕುಂಭ ಗೌಡ, ಮಾಜಿ ಅಧ್ಯಕ್ಷ ಶಿವಪ್ಪಗೌಡ, ಸೇವಾಪ್ರತಿನಿಧಿ ಪ್ರಭಾವತಿ, ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ರಾಜ್ಯಮಟ್ಟದ ಡಿಸ್ಕಸ್ ಥ್ರೋ: ಬಳಂಜದ ಸುಷ್ಮಾ ಬಿ ಪೂಜಾರಿ ಪ್ರಥಮ

Suddi Udaya

ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಮಾ.31: ಲಾಯಿಲ ಪಿಲಿಪಂಜರ ಕ್ಷೇತ್ರದಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಹಾಗೂ ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!