24.6 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

ಬೆಳಾಲು : ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು(ಎ.7) ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ ಮನೆಯಲ್ಲಿ ಸುತ್ತ ಮುತ್ತ ಮಣ್ಣಿನ ಮಡಿಕೆ, ಪಾತ್ರೆ ಗಳಲ್ಲಿ ಜಲದ ವ್ಯವಸ್ಥೆಯನ್ನು ಕಲ್ಪಿಸಿ ಪಕ್ಷಿ ಸಂಕುಲಗಳ ಜೀವ ಉಳಿಸೋಣ ಎನ್ನುವ ಸಂಕಲ್ಪದಂತೆ, ಅತಿ ಹೆಚ್ಚು ನೀರನ್ನು ಹಾಳು ಮಾಡದಂತೆ ಸದಸ್ಯರಿಗೆ ಮಾಹಿತಿ ನೀಡಿ ಪಕ್ಷಿ ಸಂಕುಲಗಳಿಗೆ ಜೀವಜಲದ ವ್ಯವಸ್ಥೆ ಮಾಡಲಾಯಿತು.


ಈ ಸಂದರ್ಭದಲ್ಲಿ ಲೆಕ್ಕ ಪರಿಶೋಧಕರಾದ ನವೀನ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಒಕ್ಕೂಟದ ಅಧ್ಯಕ್ಷರಾದ ಗಂಗಾಧರ್ ಸಾಲ್ಯಾನ್, ಒಕ್ಕೂಟದ ಪದಾಧಿಕಾರಿಗಳು, ಹಿರಿಯ ನವಜೀವನ ಸದಸ್ಯ ಕುಂಭ ಗೌಡ, ಮಾಜಿ ಅಧ್ಯಕ್ಷ ಶಿವಪ್ಪಗೌಡ, ಸೇವಾಪ್ರತಿನಿಧಿ ಪ್ರಭಾವತಿ, ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಸರಕಾರದ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದ ಕೆ. ವಸಂತ ಬಂಗೇರ ವಿಧಿವಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಮುಗ್ಗಗುತ್ತು ದಿ | ಕೆ. ಜಿ ಬಂಗೇರರ ಪತ್ನಿ ಶ್ರೀಮತಿ ವೀರಮ್ಮ ನಿಧನ

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya
error: Content is protected !!