September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

ಬೆಳಾಲು : ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು(ಎ.7) ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ ಮನೆಯಲ್ಲಿ ಸುತ್ತ ಮುತ್ತ ಮಣ್ಣಿನ ಮಡಿಕೆ, ಪಾತ್ರೆ ಗಳಲ್ಲಿ ಜಲದ ವ್ಯವಸ್ಥೆಯನ್ನು ಕಲ್ಪಿಸಿ ಪಕ್ಷಿ ಸಂಕುಲಗಳ ಜೀವ ಉಳಿಸೋಣ ಎನ್ನುವ ಸಂಕಲ್ಪದಂತೆ, ಅತಿ ಹೆಚ್ಚು ನೀರನ್ನು ಹಾಳು ಮಾಡದಂತೆ ಸದಸ್ಯರಿಗೆ ಮಾಹಿತಿ ನೀಡಿ ಪಕ್ಷಿ ಸಂಕುಲಗಳಿಗೆ ಜೀವಜಲದ ವ್ಯವಸ್ಥೆ ಮಾಡಲಾಯಿತು.


ಈ ಸಂದರ್ಭದಲ್ಲಿ ಲೆಕ್ಕ ಪರಿಶೋಧಕರಾದ ನವೀನ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಒಕ್ಕೂಟದ ಅಧ್ಯಕ್ಷರಾದ ಗಂಗಾಧರ್ ಸಾಲ್ಯಾನ್, ಒಕ್ಕೂಟದ ಪದಾಧಿಕಾರಿಗಳು, ಹಿರಿಯ ನವಜೀವನ ಸದಸ್ಯ ಕುಂಭ ಗೌಡ, ಮಾಜಿ ಅಧ್ಯಕ್ಷ ಶಿವಪ್ಪಗೌಡ, ಸೇವಾಪ್ರತಿನಿಧಿ ಪ್ರಭಾವತಿ, ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಲಾಯಿಲ: ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಕರ್ನೋಡಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya
error: Content is protected !!