25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

ಬೆಳಾಲು : ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು(ಎ.7) ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ ಮನೆಯಲ್ಲಿ ಸುತ್ತ ಮುತ್ತ ಮಣ್ಣಿನ ಮಡಿಕೆ, ಪಾತ್ರೆ ಗಳಲ್ಲಿ ಜಲದ ವ್ಯವಸ್ಥೆಯನ್ನು ಕಲ್ಪಿಸಿ ಪಕ್ಷಿ ಸಂಕುಲಗಳ ಜೀವ ಉಳಿಸೋಣ ಎನ್ನುವ ಸಂಕಲ್ಪದಂತೆ, ಅತಿ ಹೆಚ್ಚು ನೀರನ್ನು ಹಾಳು ಮಾಡದಂತೆ ಸದಸ್ಯರಿಗೆ ಮಾಹಿತಿ ನೀಡಿ ಪಕ್ಷಿ ಸಂಕುಲಗಳಿಗೆ ಜೀವಜಲದ ವ್ಯವಸ್ಥೆ ಮಾಡಲಾಯಿತು.


ಈ ಸಂದರ್ಭದಲ್ಲಿ ಲೆಕ್ಕ ಪರಿಶೋಧಕರಾದ ನವೀನ್, ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಒಕ್ಕೂಟದ ಅಧ್ಯಕ್ಷರಾದ ಗಂಗಾಧರ್ ಸಾಲ್ಯಾನ್, ಒಕ್ಕೂಟದ ಪದಾಧಿಕಾರಿಗಳು, ಹಿರಿಯ ನವಜೀವನ ಸದಸ್ಯ ಕುಂಭ ಗೌಡ, ಮಾಜಿ ಅಧ್ಯಕ್ಷ ಶಿವಪ್ಪಗೌಡ, ಸೇವಾಪ್ರತಿನಿಧಿ ಪ್ರಭಾವತಿ, ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya
error: Content is protected !!