September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

ಉರುವಾಲು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಉರುವಾಲು ವಿಭಾಗ ಇದರ ಸಹಕಾರದೊಂದಿಗೆ
ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿಂಜ ,ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ, ಜನಜಾಗೃತಿ ಗ್ರಾಮ ಸಮಿತಿ ಉರುವಾಲು, ಶ್ರೀ ಪಂಚಲಿಂಗೇಶ್ವರ ನವಜೀವನ ಸಮಿತಿ ಕೊರಿಂಜ, ಇವುಗಳ ಸಂಯುಕ್ತ ಆಶ್ರಯದಲ್ಲಿ 44ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ 5 ನೇ ವರ್ಷದ ಏಕಾಹ ಭಜನಾ ಮಹೋತ್ಸವ ಕಾರ್ಯಕ್ರಮವು ಕೊರಿಂಜ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಇವರ ಅಧ್ಯಕ್ಷತೆಯಲ್ಲಿ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.

ಜ್ಞಾನೇಶ್ ಇವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಭಜನಾ ಮಂಡಳಿಯ ಕೋಶಾಧಿಕಾರಿ ಸೀತಾರಾಮ ಆಳ್ವ ಕೊರಿಂಜ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವೇದಿಕೆಯಲ್ಲಿ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಪದ್ಮುಂಜ ಸಿ.ಎ ಬ್ಯಾಂಕ್ ನ ನಿರ್ದೇಶಕರಾದ ಶ್ರೀಮತಿ ಶಾರದ ಆರ್ ರೈ, ಕಣಿಯೂರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪ್ರಪುಲ್ಲ ಚಂದ್ರ ಅಡ್ಯಂತಾಯ, ಕಣಿಯೂರು ವಲಯದ ಮೇಲ್ವಿಚಾರಕಿ ಕು| ಶಿಲ್ಪ, ಭಜನಾ ಮಂಡಳಿ ಗೌರವಾಧ್ಯಕ್ಷ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.

ಮೈರೋಳ್ತಡ್ಕ ಶಾಲೆಯ ಸಹಶಿಕ್ಷಕರಾದ ಮಾಧವ ಗೌಡ ಕಾರ್ಯಕ್ರಮದ ನಿರೂಪಿಸಿ, ಕೃಷ್ಣಪ್ಪ ನಾಯ್ಕ ಕಲ್ಲಂಡ ಧನ್ಯವಾದವಿತ್ತರು.

Related posts

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಾತೃ ಪೂಜನ, ಮಾತೃ ವಂದನ ಮತ್ತು ಮಾತೃ ಭೋಜನ ವಿಶಿಷ್ಟ ಭಾವಪೂರ್ಣ ಕಾರ್ಯಕ್ರಮ

Suddi Udaya

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya
error: Content is protected !!