23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪೊಲೀಸ್ಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ: ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನಗೊಳಿಸಿದ್ದಾರೆಂದು ಆರೋಪಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ರಾಜು ಶೆಟ್ಟಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಉಜಿರೆ ಓಡಲ ನಿವಾಸಿ ಅಜಯ್ ಕುಮಾರ್ ಪಿ.ಕೆ ಅವರು ಇಂದು ಸಂಜೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಎ. 7 ರಂದು ಸಾಮಾಜಿಕ ಜಾಲತಾಣದಲ್ಲಿ ಒಂದು ಆಡಿಯೋ ಸಂಭಾಷಣೆಯ ತುಣುಕು ಹರಿದಾಡುತ್ತಿದ್ದು, ಆಡಿಯೋದಲ್ಲಿ ಕೇಳಿ ಬರುತ್ತಿರುವ ಸ್ವರವನ್ನು ಆಳಿಸಿದಾಗ ಚಿರಪರಿಚಿತ ಸ್ವರವಾಗಿದ್ದು, ಇದು ಮಹೇಶ್ ಶೆಟ್ಟಿ ತಿಮರೋಡಿ ಮತ್ತು ರಾಜು ಶೆಟ್ಟಿ ಇವರ ಸಂಭಾಷಣೆಯ ಸ್ವರವಾಗಿರುತ್ತದೆ. ಆಡಿಯೋದಲ್ಲಿ ಜೈನರನ್ನು ಹಾಗೂ ಜೈನ ಧರ್ಮವನ್ನು ಅತ್ಯಂತ ಅವಹೇಳನಕಾರಿಯಾಗಿ ಇಬ್ಬರು ಮಾತಾನಾಡಿದ್ದು ಜೈನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ.

ಈ ಅಡಿಯೋದಲ್ಲಿ “ ದುಡ್ಡು ಹಿಂದುಲೇನನೆ ಜೈನೆರೆನ ಅತ್ತತ್ತ, ದುಡ್ಡು ಹಿಂದುಲೆನನೆ ದುರುಪಯೋಗ ಮಲ್ಪರ ಅಕುಲು ಆಂಡಲಾ ನಮ್ಮಕ್ಕುಲೆಗು ಗೊತ್ತಾಪುಜಿ ನನಲಾ ಅವು ಬೇಜಾರ್ ಮುಲುಲ ಅಂಚನೆ ಉಂಡು ನಮ್ಮ ಅಜಿಲ ಸೀಮೆಲ ಅಂಚನೆ ಉಂಡು ಮೊಕುಲೆನ್ ಬುಳೆವರೇ ಬುಡಿಯಾರೇ ಬಲ್ಲಿ ನೆಟ್ ಪೆಟ್ ತಿಂದೆಂರ್ಡ ಅಡೆಗ್ ಜೈನೆರರ್ನ ಆಡಳಿತ ಮುಗಿಯಿಂಡ್ ಈ ಜೈನೆರೆಗ್ ಅವೊಂಜಿ ಸುಪ್ರಿಂ ಕೋರ್ಟ್ ” ಎಂದು ಹೇಳಿರುವುದಲ್ಲದೆ, ಜೈನರಿಗೆ ಅವ್ಯಾಚ್ಯ ಶಬ್ಧಗಳಿಂದ ಬೈದು ಜೈನ ಜಾತಿಯನ್ನು ನಿಂದಿಸಿರುತ್ತಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸಂಭಾಷಣೆಯನ್ನು ಆಲಿಸಿದಾಗ ಚಿರಪರಿಚಿತ ಸ್ವರಗಳಾದ, ಉಜಿರೆಯ ಕುಂಜರ್ಪ ಎಂಬಲ್ಲಿಯ ನಿವಾಸಿಯಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು, ಬಡಗಕಾರಂದೂರು ರಾಜು ಶೆಟ್ಟಿ ಇವರದ್ದಾಗಿರುತ್ತದೆ. ಫೋನಿನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ರಾಜು ಶೆಟ್ಟಿ ಇವರು ಮಾತಾನಾಡಿದ ಸಂಭಾಷಣೆಯ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಜೈನ ಜಾತಿಗೆ ಅಪಮಾನ ಹಾಗೂ ಜೈನ ಧರ್ಮದ ಬಗ್ಗೆ ನಿಂದಿಸಿ ಸಮಾಜದ ಅಶಾಂತಿಗೆ ಕಾರಣವಾಗಿದೆ ಎಂದು ದೂರಿನಲ್ಲಿ ಅಪಾದೀಸಲಾಗಿದೆ.

ಜೈನರ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡಿ ಆಘಾತವನ್ನುಂಟು ಮಾಡುವ ಉದ್ದೇಶದಿಂದ ದ್ವೇಷ ಭಾವನೆಯಿಂದ ಕೃತ್ಯವನ್ನು ಮಾಡಿದ್ದು, ಇವರಿಬ್ಬರ ವಿರುದ್ಧ, ಮೇಲೆ ಮೇಲಿನ ಅಪರಾಧಕ್ಕಾಗಿ ಹಾಗೂ ತಮ್ಮ ತನಿಖೆಯ ವೇಳೆ ಕಂಡು ಬರುವ ಎಲ್ಲಾ ರೀತಿಯ ಅಪರಾಧಕ್ಕಾಗಿ ಸೂಕ್ತ ಪ್ರಕರಣ ದಾಖಲಿಸಿ, ನ್ಯಾಯ ಒದಗಿಸಿ ಕೊಡಬೇಕಾಗಿ ಒತ್ತಾಯಿಸಿದ್ದಾರೆ. ಮನವಿ ನೀಡುವ ಸಂದರ್ಭದಲ್ಲಿ ಜೈನ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಉಗ್ರಾಹ ಮುಹೂರ್ತ, ವಿವಿಧ ಗ್ರಾಮಗಳಿಂದ ಆಗಮಿಸಿದ ತರಕಾರಿ, ಬೊಂಡ, ಅಕ್ಕಿ, ಅಡಿಕೆ, ತೆಂಗು ಸಮರ್ಪಣೆ,

Suddi Udaya
error: Content is protected !!