25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ಹತ್ತು ವಿದ್ಯಾರ್ಥಿನಿಯರಿಗೆ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷ ಅಭಿಲೇಖ ಪಿ. ಮಂತ್ರಿ, ಕಾರ್ಯದರ್ಶಿ ಹರ್ಷ ವಸಿಷ್ಠ, ರೋಟರಿ ಕ್ಲಬ್ ನ ಚುನಾಯಿತ ಅಧ್ಯಕ್ಷರಾದ ಹಾಗೂ ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ಅಶೋಕ್ ಹೆಬ್ಬಾರ್, ಬೈಸಿಕಲ್ ದಾನಿಗಳಾದ ವಿದ್ಯರಾಜ್ ಶೆಟ್ಟಿ ಬೈಸಿಕಲ್ ಗಳನ್ನು ವಿತರಿಸಿ, ಶುಭಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಗಣೇಶ್ ಕನಿಕ್ಕಿಲ , ಅಧ್ಯಕ್ಷ ಶಶಿಧರ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಪ್ರಾಸ್ತಾವಿಕ ನುಡಿಗಳೊಂದಿಗೆ ಮುಖ್ಯೋಪಾಧ್ಯಾಯರಾದ ಜಯರಾಮ್ ಮಯ್ಯ ಸ್ವಾಗತಿಸಿದರು. ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!