September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

ಮಂಗಳೂರು: ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ಮಹಿಳೆಯೊಬ್ಬರನ್ನು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಎಂದು ಮಹಿಳೆ ನೀಡಿದ ದೂರಿನ ಆರೋಪದಲ್ಲಿ ಗುರುವಾಯನಕೆರೆ ನಿವಾಸಿ, ಕೂಳೂರಿನಲ್ಲಿ ಉಸ್ತಾದ್ ಆಗಿರುವ ಜಿ. ಅಬ್ದುಲ್ ಕರೀಮ್ ಎಂಬಾತನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಎ.6 ರಂದು ಬಂಧಿಸಿದ್ದಾರೆ.

2022ರಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲಿ, ಆಕೆ ತನ್ನ ಸಂಬಂಧಿಯ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಅಬ್ದುಲ್ ಕರೀಮ್ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ. ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ. ಅನಂತರ ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದ. ಮಹಿಳೆ ತನ್ನ ಅಕ್ಕನ ಜತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಆತ ಕೆಲವು ಬಾರಿ ಮಹಿಳೆಗೆ ಕುರಾನ್ ಓದಿಸಿದ್ದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.


2022ರ ಫೆ. 10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿ ಮನೆಗೆ ಹೋಗಿದ್ದು, ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರಾನ್ ಓದಿಸಿ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದ ಎಂದು ಅಪಾದಿಸಲಾಗಿದೆ. ಅಲ್ಲದೆ ಮಹಿಳೆಯಿಂದ 55 ಸಾವಿರ ರೂ. ಪಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಒಟ್ಟು ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Related posts

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ಸವಣಾಲು: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ

Suddi Udaya

ಮತದಾರರ ಪಟ್ಟಿಯಲ್ಲಿ ಎಡವಟ್ಟು: ಮುಂಡಾಜೆಯ ಅಶ್ವಿನಿ ಎ. ಹೆಬ್ಬಾರ್ ಬಂಟ್ವಾಳ ಆಡಳಿತ ಸೌಧದಲ್ಲಿ ಮತದಾನ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya
error: Content is protected !!