July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

ಮಂಗಳೂರು: ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ಮಹಿಳೆಯೊಬ್ಬರನ್ನು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಎಂದು ಮಹಿಳೆ ನೀಡಿದ ದೂರಿನ ಆರೋಪದಲ್ಲಿ ಗುರುವಾಯನಕೆರೆ ನಿವಾಸಿ, ಕೂಳೂರಿನಲ್ಲಿ ಉಸ್ತಾದ್ ಆಗಿರುವ ಜಿ. ಅಬ್ದುಲ್ ಕರೀಮ್ ಎಂಬಾತನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಎ.6 ರಂದು ಬಂಧಿಸಿದ್ದಾರೆ.

2022ರಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲಿ, ಆಕೆ ತನ್ನ ಸಂಬಂಧಿಯ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಅಬ್ದುಲ್ ಕರೀಮ್ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ. ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ. ಅನಂತರ ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದ. ಮಹಿಳೆ ತನ್ನ ಅಕ್ಕನ ಜತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಆತ ಕೆಲವು ಬಾರಿ ಮಹಿಳೆಗೆ ಕುರಾನ್ ಓದಿಸಿದ್ದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.


2022ರ ಫೆ. 10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿ ಮನೆಗೆ ಹೋಗಿದ್ದು, ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರಾನ್ ಓದಿಸಿ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದ ಎಂದು ಅಪಾದಿಸಲಾಗಿದೆ. ಅಲ್ಲದೆ ಮಹಿಳೆಯಿಂದ 55 ಸಾವಿರ ರೂ. ಪಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಒಟ್ಟು ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Related posts

ಏಷಿಯನ್ ನೆಟ್ ಬಾಲ್ ಚಾಂಪಿಯನ್ಶಿಪ್’ ಕ್ರೀಡಾಕೂಟ: ಭಾರತ ತಂಡದ ಪ್ರಾಥಮಿಕ ತರಬೇತಿ ಶಿಬಿರಕ್ಕೆ ಎಸ್.ಡಿ.ಎಂ ಕಾಲೇಜಿನ ಚಿಂತನ್ ಬಿ ಸಿ, ಪುನೀತ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!