25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

ಮಂಗಳೂರು: ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ಮಹಿಳೆಯೊಬ್ಬರನ್ನು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಎಂದು ಮಹಿಳೆ ನೀಡಿದ ದೂರಿನ ಆರೋಪದಲ್ಲಿ ಗುರುವಾಯನಕೆರೆ ನಿವಾಸಿ, ಕೂಳೂರಿನಲ್ಲಿ ಉಸ್ತಾದ್ ಆಗಿರುವ ಜಿ. ಅಬ್ದುಲ್ ಕರೀಮ್ ಎಂಬಾತನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಎ.6 ರಂದು ಬಂಧಿಸಿದ್ದಾರೆ.

2022ರಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲಿ, ಆಕೆ ತನ್ನ ಸಂಬಂಧಿಯ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಅಲ್ಲಿ ಅಬ್ದುಲ್ ಕರೀಮ್ ನಿಮಗೆ ಯಾರೋ ಮಾಟ ಮಂತ್ರ ಮಾಡಿಸಿದ್ದಾರೆ. ಅದನ್ನು ತೆಗೆಸಬೇಕು ಎಂದು ಹೇಳಿದನೆನ್ನಲಾಗಿದೆ. ಅನಂತರ ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ನಂಬಿಸಿ ಆ ಮಹಿಳೆಯನ್ನು ಆಗಾಗ ಬರಲು ತಿಳಿಸಿದ್ದ. ಮಹಿಳೆ ತನ್ನ ಅಕ್ಕನ ಜತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಆತ ಕೆಲವು ಬಾರಿ ಮಹಿಳೆಗೆ ಕುರಾನ್ ಓದಿಸಿದ್ದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ.


2022ರ ಫೆ. 10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿ ಮನೆಗೆ ಹೋಗಿದ್ದು, ಅಲ್ಲಿ ಉಸ್ತಾದ್ ಆಕೆಯಲ್ಲಿ ಕುರಾನ್ ಓದಿಸಿ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದ ಎಂದು ಅಪಾದಿಸಲಾಗಿದೆ. ಅಲ್ಲದೆ ಮಹಿಳೆಯಿಂದ 55 ಸಾವಿರ ರೂ. ಪಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಒಟ್ಟು ಸುಮಾರು ಒಂದು ಲಕ್ಷ ರೂ. ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!