July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

ಬೆಳ್ತಂಗಡಿ : ಮಣ್ಣಿನ ಹರಕೆಯ ಖ್ಯಾತಿಯ ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಏ. 6ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಜರಗಿತು.

ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು, ಅನ್ನಸಂತರ್ಪಣೆ ನಡೆಯಿತು. ರಾತ್ರಿ ರಂಗ ಪೂಜೆ, ಉತ್ಸವ ಜರಗಿತು.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಸತೀಶ್ಚಂದ್ರ ಸುರ್ಯಗುತ್ತು,ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖರ್ ಅಜ್ರಿ, ಸದಸ್ಯರು,ಮುನಿರಾಜ ಅಜ್ರಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಜಾತ್ರಾ ಮಹೋತ್ಸವ:
ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಏ. 7ರಿಂದ11ರವರೆಗೆ ನಡೆಯಲಿದೆ. ಎ.7ರಂದು ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ ಇತ್ಯಾದಿ ಕಾರ್ಯಕ್ರಮಗಳು ಜರುಗಲಿವೆ.

Related posts

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಉಜಿರೆ ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಇದರ ವತಿಯಿಂದ ಪೌರತ್ವ ತರಬೇತಿ ಶಿಬಿರ ಸಮಾರೋಪ ಸಮಾರಂಭ

Suddi Udaya
error: Content is protected !!