April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

ಅರಸಿನಮಕ್ಕಿ : ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಎ. 07 ರಂದು ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ‌ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇವೆರಡರ ಸಹಭಾಗಿತ್ವದಲ್ಲಿ ಒಂದು ದಿನದ ಬೇಸಿಗೆ ಶಿಬಿರವನ್ನು ಸಹ್ಯಾದ್ರಿ ಸಂಚಯದ ಕಾರ್ಯದರ್ಶಿ  ಅಂತರ್ ರಾಷ್ಟ್ರೀಯ ಖ್ಯಾತಿಯ ಕಲಾವಿದ ಹಾಗೂ ಪರಿಸರ ಪ್ರೇಮಿ ದಿನೇಶ್ ಹೊಳ್ಳ ಮಂಗಳೂರು ನಡೆಸಿಕೊಟ್ಟರು.

ಶಿಬಿರದಲ್ಲಿ ಹತ್ತಿರದ ಹೊಸ್ತೋಟ ಶಾಲಾ ಮಕ್ಕಳು ಭಾಗವಹಿಸಿದ್ದರು. ಖ್ಯಾತ ಉರಗ ಸಂರಕ್ಷಕ ಸುರೇಶ್ ರಮೇಶ್ ಶಿಶಿಲ ಹಾಗೂ  ಅರಣ್ಯಾಧಿಕಾರಿ ಸಚಿನ್ ಉರಗಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ದಿನೇಶ್ ಹೊಳ್ಳ ಮಕ್ಕಳಿಗೆ ಪೇಪರ್ ಕ್ರಾಫ್ಟ್ ಅಕ್ಷರ ವಿನ್ಯಾಸದ ಬಗ್ಗೆ ಮಾಹಿತಿ ನೀಡಿ, ಮಿಮಿಕ್ರಿ, ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಿ ಮಕ್ಕಳನ್ನು ರಂಜಿಸಿದರು. ವಿಶೇಷವಾಗಿ ಪಶ್ಚಿಮ ಘಟ್ಟಗಳ ಮತ್ತು ಅದರಲ್ಲಿರುವ ಜೀವವೈವಿಧ್ಯಗಳ ಸಂರಕ್ಷಣೆಯ ವಿಚಾರದಲ್ಲಿ ಮಕ್ಕಳು ಏನು ಪ್ರಯತ್ನ ಮಾಡಬಹುದೆಂದು ಮನಮುಟ್ಟುವಂತೆ ವಿವರಿಸಿದರು.

ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರವಹಣಾ ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ ಸ್ವಯಂಸೇವಕರಾದ ಅವಿನಾಶ್ ಬಿಢೆ ಅರಸಿನಮಕ್ಕಿ ‌ಹಾಗೂ ರಮೇಶ್.ಬಿ.ಶಿಶಿಲ ಸಹಕಾರ ನೀಡಿದರು.ಹೊಸ್ತೋಟ ಮತ್ತು ಅರಸಿನಮಕ್ಕಿ ಶಾಲಾ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಡಾ|| ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 30ನೇ ವರ್ಷದ ರಾಜ್ಯಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!