23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

ಉಜಿರೆ: ಅಭ್ಯಾಸ್ ಪದವಿ ಪೂರ್ವ ಕಾಲೇಜು ಉಜಿರೆ ಕಾಶಿಬೆಟ್ಟು ಪ್ರಗತಿನಗರ ಇದರ ವತಿಯಿಂದ ಅಭ್ಯಾಸ್ ಸ್ಪಾರ್ಕ್ ಶೀರ್ಷಿಕೆಯಡಿಯಲ್ಲಿ ಸೇತುಬಂಧ ಕಾರ್ಯಕ್ರಮ ಏ.6 ರಂದು ನಡೆಯಿತು.

ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಉದ್ಘಾಟಿಸಿ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಹಾಗೂ ಪಿ.ಆರ್.ಓ ಧನಂಜಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಷಯವಾರು ಪರಿಣಿತ ಉಪನ್ಯಾಸಕರುಗಳು ವೇದಿಕೆಯಲ್ಲಿ ಆಸೀನರಾಗಿದ್ದರು. ಕಾಲೇಜಿನ ಉಪಪ್ರಾಂಶುಪಾಲರು ಪ್ರೊ. ಚಂದ್ರಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತಾವು ಆಯ್ಕೆ ಮಾಡುವ ವಿಷಯ ಹಾಗೂ ಮುಂದಿನ ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು. 80ಕ್ಕಿಂತ ಹೆಚ್ಚು ವಿದ್ಯಾರ್ಥಿ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಗುರುಪ್ರಸಾದ್ ಭಟ್ ಧನ್ಯವಾದ ನೀಡಿದರು.

Related posts

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!