July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಪ್ರತಿಷ್ಠಿತ ಕಾಲೇಜಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ.

593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡು, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ ಮಾಡಿದವರು ಹಲವರು. 594 ಅಂಕಗಳನ್ನು ಪಡೆದುಕೊಂಡ ಪ್ರತೀಕ್ಷಾ ಎಸ್ ರಾಜ್ಯಕ್ಕೆ ಆರನೆಯ ಸ್ಥಾನ, 592 ಅಂಕಗಳನ್ನು ಪಡೆದುಕೊಂಡ ಕೃಪಾ ಸಾಂಚಿ ಮೌರ್ಯ ರಾಜ್ಯಕ್ಕೆ ಎಂಟನೆಯ ಸ್ಥಾನ, 591 ಅಂಕಗಳನ್ನು ಪಡೆದು ಕೊಂಡ ಹೇಮಂತ್ ಎಸ್ ಜೆ ರಾಜ್ಯಕ್ಕೆ ಒಂಬತ್ತನೆಯ ಸ್ಥಾನ ಪಡೆದು ಕೊಂಡಿದ್ದಾರೆ.

ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವುದು ಉಲ್ಲೇಖನೀಯ. ಕಳೆದ ಬಾರಿ 597 ಅಂಕಗಳ ಜೊತೆಗೆ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ ಸ್ಥಾನಿಗಳಾಗಿದ್ದರು. ರಾಜ್ಯದ ಟಾಪ್ ಟೆನ್ ನಲ್ಲಿ ಎಕ್ಸೆಲ್ ನ 9 ವಿದ್ಯಾರ್ಥಿಗಳಿದ್ದರು. ಕಳೆದ ಜನವರಿ ತಿಂಗಳಲ್ಲಿ ನಡೆದ ಜೆ ಇ ಇ ಪರೀಕ್ಷೆಯಲ್ಲಿ ಪ್ರಣವ್ ಪೊನ್ನಣ್ಣ 99.58, ಮೊಹಮ್ಮದ್ ಆಯ್ಮಾನ್ 99.23, ನಿಶಾಂತ್ ಜೈನ್ 99.21, ನಾಗಣ್ಣ ಗೌಡ 99.15 ಪರ್ಸಂಟೇಲ್ ನೊಂದಿಗೆ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ ಸಿ ಇ ಟಿ ಯಲ್ಲಿ 17 ವಿದ್ಯಾರ್ಥಿಗಳು 1000 ದ ಒಳಗೆ ರಾಂಕ್, 48 ವಿದ್ಯಾರ್ಥಿಗಳು 2000ದ ಒಳಗೆ ರಾಂಕ್ ಪಡೆದುಕೊಂಡಿದ್ದರು. ಕಳೆದ ಬಾರಿಯ ನೀಟ್ ಪರೀಕ್ಷೆಯಲ್ಲಿ 720 ರಲ್ಲಿ 710 ಅಂಕಗಳನ್ನು ಪಡೆದುಕೊಂಡು ಪ್ರಜ್ವಲ್ ಎಚ್ ಎಂ ರಾಜ್ಯಕ್ಕೆ ಗೌರವವನ್ನು ತಂದಿದ್ದರು. ಒಟ್ಟು ನಾಲ್ಕು ವಿದ್ಯಾರ್ಥಿಗಳು ಏಮ್ಸ್ ಗೆ ಆಯ್ಕೆಯಾಗಿದ್ದರು. ಹಲವು ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಲ್ಲಿ ಸ್ಥಾನ ಪಡೆಯುವುದರೊಂದಿಗೆ, ರಾಜ್ಯದ ಶೈಕ್ಷಣಿಕ ಭೂಪಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದರು. ಪ್ರತಿ ವರ್ಷ ಎಕ್ಸೆಲ್ ಕಾಲೇಜಿನಿಂದ ನೂರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಎಂ.ಬಿ. ಬಿ.ಎಸ್ ಗೆ ಆಯ್ಕೆಯಾಗುತ್ತಾ ಬಂದಿರುವುದು ವಿಶೇಷ.

ರಾಜ್ಯದಲ್ಲಿ ಪ್ರತಿ ವರ್ಷ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣಕ್ಕೆ ಕಳುಹಿಸುತ್ತಿರುವ ಕೀರ್ತಿ ಎಕ್ಸೆಲ್ ಕಾಲೇಜಿನದ್ದಾಗಿದೆ. ಎನ್ ಡಿ ಎ ಸಹಿತ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ. ಪ್ರತಿ ಬಾರಿಯಂತೆ , ಎಕ್ಸೆಲ್ ನ ವಿಜಯದ ಓಟ ಮುಂದುವರೆದಿದ್ದು, ಈ ಬಾರಿಯ ಅಪೂರ್ವ ಸಾಧನೆಗೆ ಪಾಲಕರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ಹೆತ್ತವರು ಶೈಕ್ಷಣಿಕ ಸಾಧಕರನ್ನು ಅಭಿನಂದಿಸಿದ್ದಾರೆ.

Related posts

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ತಾಲೂಕಿಗೆ ಶೇ. 94.18 ಫಲಿತಾಂಶ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ದ.ಕ ಜಿಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ತನಿಖಾ ಸಿಬ್ಬಂದಿಗಳಿಗೆ ವೈಜ್ಞಾನಿಕ ತನಿಖೆ ಪ್ರಾಥಮಿಕ ಹಂತದ ತರಬೇತಿ ಕಾರ್ಯಾಗಾರ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya
error: Content is protected !!