April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಮಾರಂಭವನ್ನು ಶಾಲಾ ಸಂಚಾಲಕ ಅನಂತ ಪದ್ಮನಾಭ ಭಟ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಶಾಲೆಯಲ್ಲಿ ಕಲಿತಂತಹ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಮರೆಯದೆ ಪಾಲಿಸಿ ಎಂದು ಶುಭ ಹಾರೈಸಿದರು.

ಎಲ್ಲಾ ವಿದ್ಯಾರ್ಥಿಗಳು ಹಣತೆ ಬೆಳಗಿಸಿ ಪ್ರೀತಿ ಮತ್ತು ಮಾನವತೆಯ ಹಾಗೂ ಸತ್ಯದ‌ ಜೊತೆಗೆ ಬದುಕುವ ಪ್ರಮಾಣ ಮಾಡಿದರು. ಮಕ್ಕಳ ಬಾಲ್ಯದಿಂದ ಹಿಡಿದು ಇಲ್ಲಿಯವರೆಗಿನ ವಿಡಿಯೋವನ್ನು ತೋರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ತಮ್ಮ ನೆನಪಿನ ಬುತ್ತಿಯನ್ನು ಅಭಿಪ್ರಾಯದ ಮುಖಾಂತರ ಪ್ರಸ್ತುತ‌ ಪಡಿಸಿದರು. ಅದಾದ ಬಳಿಕ ಶಿಕ್ಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿದಾಯ ಕೂಟದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು. ಬಳಿಕ ಎಲ್ಲ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಜ್ಞಾನದೇಗುಲಕ್ಕೆ ಟಿವಿಯನ್ನು ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಮತಿ ರೇಖಾ ಹಾಗೂ ಶ್ರೀಮತಿ ಅಂಜು ನೆರವೇರಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ರಮಾರಾಜೇಶ್ ವಂದನಾರ್ಪಣೆಯನ್ನು ಗೈದರು .ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಈ ವಿದಾಯ ಕೂಟಕ್ಕೆ ಪ್ರತ್ಯಕ್ಷ ದರ್ಶಿಗಳಾದರು.

Related posts

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ತಂಡದಿಂದ ಮಾನವೀಯ ಕಾರ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊರ್ವರಿಗೆ ರೂ 23 ಸಾವಿರ ಹಸ್ತಾಂತರ

Suddi Udaya
error: Content is protected !!