July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಮಾರಂಭವನ್ನು ಶಾಲಾ ಸಂಚಾಲಕ ಅನಂತ ಪದ್ಮನಾಭ ಭಟ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಶಾಲೆಯಲ್ಲಿ ಕಲಿತಂತಹ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಮರೆಯದೆ ಪಾಲಿಸಿ ಎಂದು ಶುಭ ಹಾರೈಸಿದರು.

ಎಲ್ಲಾ ವಿದ್ಯಾರ್ಥಿಗಳು ಹಣತೆ ಬೆಳಗಿಸಿ ಪ್ರೀತಿ ಮತ್ತು ಮಾನವತೆಯ ಹಾಗೂ ಸತ್ಯದ‌ ಜೊತೆಗೆ ಬದುಕುವ ಪ್ರಮಾಣ ಮಾಡಿದರು. ಮಕ್ಕಳ ಬಾಲ್ಯದಿಂದ ಹಿಡಿದು ಇಲ್ಲಿಯವರೆಗಿನ ವಿಡಿಯೋವನ್ನು ತೋರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ತಮ್ಮ ನೆನಪಿನ ಬುತ್ತಿಯನ್ನು ಅಭಿಪ್ರಾಯದ ಮುಖಾಂತರ ಪ್ರಸ್ತುತ‌ ಪಡಿಸಿದರು. ಅದಾದ ಬಳಿಕ ಶಿಕ್ಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿದಾಯ ಕೂಟದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು. ಬಳಿಕ ಎಲ್ಲ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಜ್ಞಾನದೇಗುಲಕ್ಕೆ ಟಿವಿಯನ್ನು ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಮತಿ ರೇಖಾ ಹಾಗೂ ಶ್ರೀಮತಿ ಅಂಜು ನೆರವೇರಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ರಮಾರಾಜೇಶ್ ವಂದನಾರ್ಪಣೆಯನ್ನು ಗೈದರು .ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಈ ವಿದಾಯ ಕೂಟಕ್ಕೆ ಪ್ರತ್ಯಕ್ಷ ದರ್ಶಿಗಳಾದರು.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಸುಂದರ ಭಾರತ ಪ್ರತಿಷ್ಠಾನ ಬೆಂಗಳೂರು ಇವರ ವತಿಯಿಂದ ಸರಕಾರಿ ಶಾಲೆಗಳಿಗೆ ನೀಡಲಾಗುವ ಉಚಿತ ನೋಟ್ ಪುಸ್ತಕ ಗಳ ವಿತರಣೆ

Suddi Udaya
error: Content is protected !!