August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ನಡೆಯಿತು.

(ಎ. 08) ಇಂದು ಬೆಳಗ್ಗೆ ಉತ್ಸವ ಬಲಿ, ವಿಶೇಷ ಸುತ್ತುಗಳು, ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ, ಅಪ್ಪಂಗಾಯಿ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಂತರ ಪಲ್ಲಪೂಜೆ, ಆರಾಟಕ್ಕೆ ಕುದಿ ಕರೆಯುವುದು, ಪ್ರಸಾದ ವಿತರಣೆ, ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ 3.30 ರಿಂದ 5.30 ರ ವರೆಗೆ ವಿವಿಧ ಭಜನಾ ಮಂಡಳಿ ಗಳಿಂದ ಭಜನಾ ಸೇವೆ, ಸಂಜೆ 6.30 ರಿಂದ ತೇರ ಕಲಶ, ಉತ್ಸವ ಬಲಿ, ವಿಶೇಷ ಸುತ್ತುಗಳು, ನಂತರ ರಕ್ತೇಶ್ವರಿ ದೈವದ ನೇಮೋತ್ಸವ, ರಾತ್ರಿ 10.30 ಕ್ಕೆ ಶ್ರೀ ಸದಾಶಿವ ದೇವರ ರಥೋತ್ಸವ, ನಂತರ ರಕ್ತೇಶ್ವರಿ ದೈವದ ಸಹಿತ ಶ್ರೀ ದೇವರ ಮೂಲ ಕ್ಷೇತ್ರಕ್ಕೆ ಭೇಟಿ, ರಾತ್ರಿ 11.00 ಕ್ಕೆ ಶ್ರೀ ಕ್ಷೇತ್ರಕ್ಕೆ ದೇವರ ಆಗಮನ, ನಂತರ ಫಲಾಹಾರ ಮತ್ತು ಭೂತಬಲಿ, ನಂತರ ದೇವರ ಶಯನೋತ್ಸವ ಕಾರ್ಯಕ್ರಮ ಚೆಂಡೆನಾದನ, ಬ್ಯಾಂಡ್ ವಾಳಗ, ಸಿಡಿಮದ್ದು, ಜೇಂಕಾರದೊಂದಿಗೆ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮ ನಡೆಯಲಿದೆ.

Related posts

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ : ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya
error: Content is protected !!