23.3 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟ‌ರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ.

ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು ಅಂಗಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.

ಇಂದು ಬೆಳಗ್ಗೆ ಶಟರ್ ಮುರಿದಿರುವುದು ಸ್ಥಳೀಯರು ನೋಡಿ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಠಾಣೆಯ ಪ್ರಮೋದ್, ಕುಶಾಲಪ್ಪ ಯಂ. ಶಿವಾನಂದ, ಗಿರೀಶ್, ಸ್ಥಳಕ್ಕೆ ಆಗಮಿಸಿದ್ದು, ಸುತ್ತ ಮುತ್ತ ಹಾಗೂ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮರ ಪರಿಶೀಲನೆ ಮಾಡಿದ್ದಾರೆ. ಮಧ್ಯ ರಾತ್ರಿ ಸುಮಾರು 1 ರಿಂದ 2 ಗಂಟೆ ಸುಮಾರಿಗೆ, ಮೂವರು ಸೇರಿ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!