September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

ಅರಸಿನಮಕ್ಕಿ : ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಎ. 07 ರಂದು ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ‌ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇವೆರಡರ ಸಹಭಾಗಿತ್ವದಲ್ಲಿ ಒಂದು ದಿನದ ಬೇಸಿಗೆ ಶಿಬಿರವನ್ನು ಸಹ್ಯಾದ್ರಿ ಸಂಚಯದ ಕಾರ್ಯದರ್ಶಿ  ಅಂತರ್ ರಾಷ್ಟ್ರೀಯ ಖ್ಯಾತಿಯ ಕಲಾವಿದ ಹಾಗೂ ಪರಿಸರ ಪ್ರೇಮಿ ದಿನೇಶ್ ಹೊಳ್ಳ ಮಂಗಳೂರು ನಡೆಸಿಕೊಟ್ಟರು.

ಶಿಬಿರದಲ್ಲಿ ಹತ್ತಿರದ ಹೊಸ್ತೋಟ ಶಾಲಾ ಮಕ್ಕಳು ಭಾಗವಹಿಸಿದ್ದರು. ಖ್ಯಾತ ಉರಗ ಸಂರಕ್ಷಕ ಸುರೇಶ್ ರಮೇಶ್ ಶಿಶಿಲ ಹಾಗೂ  ಅರಣ್ಯಾಧಿಕಾರಿ ಸಚಿನ್ ಉರಗಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ದಿನೇಶ್ ಹೊಳ್ಳ ಮಕ್ಕಳಿಗೆ ಪೇಪರ್ ಕ್ರಾಫ್ಟ್ ಅಕ್ಷರ ವಿನ್ಯಾಸದ ಬಗ್ಗೆ ಮಾಹಿತಿ ನೀಡಿ, ಮಿಮಿಕ್ರಿ, ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಿ ಮಕ್ಕಳನ್ನು ರಂಜಿಸಿದರು. ವಿಶೇಷವಾಗಿ ಪಶ್ಚಿಮ ಘಟ್ಟಗಳ ಮತ್ತು ಅದರಲ್ಲಿರುವ ಜೀವವೈವಿಧ್ಯಗಳ ಸಂರಕ್ಷಣೆಯ ವಿಚಾರದಲ್ಲಿ ಮಕ್ಕಳು ಏನು ಪ್ರಯತ್ನ ಮಾಡಬಹುದೆಂದು ಮನಮುಟ್ಟುವಂತೆ ವಿವರಿಸಿದರು.

ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರವಹಣಾ ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ ಸ್ವಯಂಸೇವಕರಾದ ಅವಿನಾಶ್ ಬಿಢೆ ಅರಸಿನಮಕ್ಕಿ ‌ಹಾಗೂ ರಮೇಶ್.ಬಿ.ಶಿಶಿಲ ಸಹಕಾರ ನೀಡಿದರು.ಹೊಸ್ತೋಟ ಮತ್ತು ಅರಸಿನಮಕ್ಕಿ ಶಾಲಾ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಐವರು ವಿದ್ಯಾರ್ಥಿಗಳಿಗೆ ಸೈಕಲ್ ಕೊಡುಗೆ ನೀಡಿದ ಉದ್ಯಮಿ ಉಮರ್ ಜಿ.ಕೆ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya
error: Content is protected !!