23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

ಅರಸಿನಮಕ್ಕಿ : ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಎ. 07 ರಂದು ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ‌ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇವೆರಡರ ಸಹಭಾಗಿತ್ವದಲ್ಲಿ ಒಂದು ದಿನದ ಬೇಸಿಗೆ ಶಿಬಿರವನ್ನು ಸಹ್ಯಾದ್ರಿ ಸಂಚಯದ ಕಾರ್ಯದರ್ಶಿ  ಅಂತರ್ ರಾಷ್ಟ್ರೀಯ ಖ್ಯಾತಿಯ ಕಲಾವಿದ ಹಾಗೂ ಪರಿಸರ ಪ್ರೇಮಿ ದಿನೇಶ್ ಹೊಳ್ಳ ಮಂಗಳೂರು ನಡೆಸಿಕೊಟ್ಟರು.

ಶಿಬಿರದಲ್ಲಿ ಹತ್ತಿರದ ಹೊಸ್ತೋಟ ಶಾಲಾ ಮಕ್ಕಳು ಭಾಗವಹಿಸಿದ್ದರು. ಖ್ಯಾತ ಉರಗ ಸಂರಕ್ಷಕ ಸುರೇಶ್ ರಮೇಶ್ ಶಿಶಿಲ ಹಾಗೂ  ಅರಣ್ಯಾಧಿಕಾರಿ ಸಚಿನ್ ಉರಗಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ದಿನೇಶ್ ಹೊಳ್ಳ ಮಕ್ಕಳಿಗೆ ಪೇಪರ್ ಕ್ರಾಫ್ಟ್ ಅಕ್ಷರ ವಿನ್ಯಾಸದ ಬಗ್ಗೆ ಮಾಹಿತಿ ನೀಡಿ, ಮಿಮಿಕ್ರಿ, ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಿ ಮಕ್ಕಳನ್ನು ರಂಜಿಸಿದರು. ವಿಶೇಷವಾಗಿ ಪಶ್ಚಿಮ ಘಟ್ಟಗಳ ಮತ್ತು ಅದರಲ್ಲಿರುವ ಜೀವವೈವಿಧ್ಯಗಳ ಸಂರಕ್ಷಣೆಯ ವಿಚಾರದಲ್ಲಿ ಮಕ್ಕಳು ಏನು ಪ್ರಯತ್ನ ಮಾಡಬಹುದೆಂದು ಮನಮುಟ್ಟುವಂತೆ ವಿವರಿಸಿದರು.

ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರವಹಣಾ ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ ಸ್ವಯಂಸೇವಕರಾದ ಅವಿನಾಶ್ ಬಿಢೆ ಅರಸಿನಮಕ್ಕಿ ‌ಹಾಗೂ ರಮೇಶ್.ಬಿ.ಶಿಶಿಲ ಸಹಕಾರ ನೀಡಿದರು.ಹೊಸ್ತೋಟ ಮತ್ತು ಅರಸಿನಮಕ್ಕಿ ಶಾಲಾ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya
error: Content is protected !!