22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

ಉಜಿರೆ: ಅಭ್ಯಾಸ್ ಪದವಿ ಪೂರ್ವ ಕಾಲೇಜು ಉಜಿರೆ ಕಾಶಿಬೆಟ್ಟು ಪ್ರಗತಿನಗರ ಇದರ ವತಿಯಿಂದ ಅಭ್ಯಾಸ್ ಸ್ಪಾರ್ಕ್ ಶೀರ್ಷಿಕೆಯಡಿಯಲ್ಲಿ ಸೇತುಬಂಧ ಕಾರ್ಯಕ್ರಮ ಏ.6 ರಂದು ನಡೆಯಿತು.

ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಉದ್ಘಾಟಿಸಿ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಹಾಗೂ ಪಿ.ಆರ್.ಓ ಧನಂಜಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಷಯವಾರು ಪರಿಣಿತ ಉಪನ್ಯಾಸಕರುಗಳು ವೇದಿಕೆಯಲ್ಲಿ ಆಸೀನರಾಗಿದ್ದರು. ಕಾಲೇಜಿನ ಉಪಪ್ರಾಂಶುಪಾಲರು ಪ್ರೊ. ಚಂದ್ರಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತಾವು ಆಯ್ಕೆ ಮಾಡುವ ವಿಷಯ ಹಾಗೂ ಮುಂದಿನ ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು. 80ಕ್ಕಿಂತ ಹೆಚ್ಚು ವಿದ್ಯಾರ್ಥಿ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಗುರುಪ್ರಸಾದ್ ಭಟ್ ಧನ್ಯವಾದ ನೀಡಿದರು.

Related posts

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಪ್ರೋ| ಎ. ಕೃಷ್ಣಪ್ಪ ಪೂಜಾರಿಯವರಿಗೆ ಪೇಜಾವರ ಶ್ರೀ ವಿಶ್ವೇಶತೀರ್ಥ “ಜೀವಮಾನ ಸಾಧನಾ ಪ್ರಶಸ್ತಿ”

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!