23.1 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಮಾರಂಭವನ್ನು ಶಾಲಾ ಸಂಚಾಲಕ ಅನಂತ ಪದ್ಮನಾಭ ಭಟ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಶಾಲೆಯಲ್ಲಿ ಕಲಿತಂತಹ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಮರೆಯದೆ ಪಾಲಿಸಿ ಎಂದು ಶುಭ ಹಾರೈಸಿದರು.

ಎಲ್ಲಾ ವಿದ್ಯಾರ್ಥಿಗಳು ಹಣತೆ ಬೆಳಗಿಸಿ ಪ್ರೀತಿ ಮತ್ತು ಮಾನವತೆಯ ಹಾಗೂ ಸತ್ಯದ‌ ಜೊತೆಗೆ ಬದುಕುವ ಪ್ರಮಾಣ ಮಾಡಿದರು. ಮಕ್ಕಳ ಬಾಲ್ಯದಿಂದ ಹಿಡಿದು ಇಲ್ಲಿಯವರೆಗಿನ ವಿಡಿಯೋವನ್ನು ತೋರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ತಮ್ಮ ನೆನಪಿನ ಬುತ್ತಿಯನ್ನು ಅಭಿಪ್ರಾಯದ ಮುಖಾಂತರ ಪ್ರಸ್ತುತ‌ ಪಡಿಸಿದರು. ಅದಾದ ಬಳಿಕ ಶಿಕ್ಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿದಾಯ ಕೂಟದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು. ಬಳಿಕ ಎಲ್ಲ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಜ್ಞಾನದೇಗುಲಕ್ಕೆ ಟಿವಿಯನ್ನು ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಮತಿ ರೇಖಾ ಹಾಗೂ ಶ್ರೀಮತಿ ಅಂಜು ನೆರವೇರಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ರಮಾರಾಜೇಶ್ ವಂದನಾರ್ಪಣೆಯನ್ನು ಗೈದರು .ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಈ ವಿದಾಯ ಕೂಟಕ್ಕೆ ಪ್ರತ್ಯಕ್ಷ ದರ್ಶಿಗಳಾದರು.

Related posts

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya
error: Content is protected !!