23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಮಾರಂಭವನ್ನು ಶಾಲಾ ಸಂಚಾಲಕ ಅನಂತ ಪದ್ಮನಾಭ ಭಟ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಶಾಲೆಯಲ್ಲಿ ಕಲಿತಂತಹ ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಮರೆಯದೆ ಪಾಲಿಸಿ ಎಂದು ಶುಭ ಹಾರೈಸಿದರು.

ಎಲ್ಲಾ ವಿದ್ಯಾರ್ಥಿಗಳು ಹಣತೆ ಬೆಳಗಿಸಿ ಪ್ರೀತಿ ಮತ್ತು ಮಾನವತೆಯ ಹಾಗೂ ಸತ್ಯದ‌ ಜೊತೆಗೆ ಬದುಕುವ ಪ್ರಮಾಣ ಮಾಡಿದರು. ಮಕ್ಕಳ ಬಾಲ್ಯದಿಂದ ಹಿಡಿದು ಇಲ್ಲಿಯವರೆಗಿನ ವಿಡಿಯೋವನ್ನು ತೋರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ತಮ್ಮ ನೆನಪಿನ ಬುತ್ತಿಯನ್ನು ಅಭಿಪ್ರಾಯದ ಮುಖಾಂತರ ಪ್ರಸ್ತುತ‌ ಪಡಿಸಿದರು. ಅದಾದ ಬಳಿಕ ಶಿಕ್ಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ವಿದಾಯ ಕೂಟದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನವನ್ನು ನೀಡಲಾಯಿತು. ಬಳಿಕ ಎಲ್ಲ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು. 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಜ್ಞಾನದೇಗುಲಕ್ಕೆ ಟಿವಿಯನ್ನು ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮವನ್ನು ಶಿಕ್ಷಕರಾದ ಶ್ರೀಮತಿ ರೇಖಾ ಹಾಗೂ ಶ್ರೀಮತಿ ಅಂಜು ನೆರವೇರಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ರಮಾರಾಜೇಶ್ ವಂದನಾರ್ಪಣೆಯನ್ನು ಗೈದರು .ಶಾಲಾ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಈ ವಿದಾಯ ಕೂಟಕ್ಕೆ ಪ್ರತ್ಯಕ್ಷ ದರ್ಶಿಗಳಾದರು.

Related posts

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಶಿಶಿಲ: ಗುಡ್ಡೆತೋಟ ಮನೆ ಯಮುನಾ ನಿಧನ

Suddi Udaya

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya
error: Content is protected !!