25.2 C
ಪುತ್ತೂರು, ಬೆಳ್ತಂಗಡಿ
April 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟ‌ರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ.

ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು ಅಂಗಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.

ಇಂದು ಬೆಳಗ್ಗೆ ಶಟರ್ ಮುರಿದಿರುವುದು ಸ್ಥಳೀಯರು ನೋಡಿ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಠಾಣೆಯ ಪ್ರಮೋದ್, ಕುಶಾಲಪ್ಪ ಯಂ. ಶಿವಾನಂದ, ಗಿರೀಶ್, ಸ್ಥಳಕ್ಕೆ ಆಗಮಿಸಿದ್ದು, ಸುತ್ತ ಮುತ್ತ ಹಾಗೂ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮರ ಪರಿಶೀಲನೆ ಮಾಡಿದ್ದಾರೆ. ಮಧ್ಯ ರಾತ್ರಿ ಸುಮಾರು 1 ರಿಂದ 2 ಗಂಟೆ ಸುಮಾರಿಗೆ, ಮೂವರು ಸೇರಿ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ