September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟ‌ರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ.

ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು ಅಂಗಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.

ಇಂದು ಬೆಳಗ್ಗೆ ಶಟರ್ ಮುರಿದಿರುವುದು ಸ್ಥಳೀಯರು ನೋಡಿ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಠಾಣೆಯ ಪ್ರಮೋದ್, ಕುಶಾಲಪ್ಪ ಯಂ. ಶಿವಾನಂದ, ಗಿರೀಶ್, ಸ್ಥಳಕ್ಕೆ ಆಗಮಿಸಿದ್ದು, ಸುತ್ತ ಮುತ್ತ ಹಾಗೂ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮರ ಪರಿಶೀಲನೆ ಮಾಡಿದ್ದಾರೆ. ಮಧ್ಯ ರಾತ್ರಿ ಸುಮಾರು 1 ರಿಂದ 2 ಗಂಟೆ ಸುಮಾರಿಗೆ, ಮೂವರು ಸೇರಿ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ವೇಣೂರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya
error: Content is protected !!