22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟ‌ರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ.

ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು ಅಂಗಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.

ಇಂದು ಬೆಳಗ್ಗೆ ಶಟರ್ ಮುರಿದಿರುವುದು ಸ್ಥಳೀಯರು ನೋಡಿ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಠಾಣೆಯ ಪ್ರಮೋದ್, ಕುಶಾಲಪ್ಪ ಯಂ. ಶಿವಾನಂದ, ಗಿರೀಶ್, ಸ್ಥಳಕ್ಕೆ ಆಗಮಿಸಿದ್ದು, ಸುತ್ತ ಮುತ್ತ ಹಾಗೂ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮರ ಪರಿಶೀಲನೆ ಮಾಡಿದ್ದಾರೆ. ಮಧ್ಯ ರಾತ್ರಿ ಸುಮಾರು 1 ರಿಂದ 2 ಗಂಟೆ ಸುಮಾರಿಗೆ, ಮೂವರು ಸೇರಿ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ರೆಖ್ಯ ಅಂಗನವಾಡಿಯಲ್ಲಿ ಹಾಳಾದ ಮೊಟ್ಟೆ ವಿತರಣೆ: ಗ್ರಾಮಸ್ಥರ ಅಕ್ರೋಶ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಅನಾಥರಾಗಿ ತಿರುಗಿಡುತ್ತಿದ್ದ ವಯೋವೃದ್ಧ ತಂದೆಯನ್ನು ಮಗನ ಜವಾಬ್ದಾರಿ ಗೆ ವಹಿಸಿದ ವೇಣೂರು ಪೋಲೀಸರು

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!