September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

ಅರಸಿನಮಕ್ಕಿ : ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಎ. 07 ರಂದು ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ‌ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇವೆರಡರ ಸಹಭಾಗಿತ್ವದಲ್ಲಿ ಒಂದು ದಿನದ ಬೇಸಿಗೆ ಶಿಬಿರವನ್ನು ಸಹ್ಯಾದ್ರಿ ಸಂಚಯದ ಕಾರ್ಯದರ್ಶಿ  ಅಂತರ್ ರಾಷ್ಟ್ರೀಯ ಖ್ಯಾತಿಯ ಕಲಾವಿದ ಹಾಗೂ ಪರಿಸರ ಪ್ರೇಮಿ ದಿನೇಶ್ ಹೊಳ್ಳ ಮಂಗಳೂರು ನಡೆಸಿಕೊಟ್ಟರು.

ಶಿಬಿರದಲ್ಲಿ ಹತ್ತಿರದ ಹೊಸ್ತೋಟ ಶಾಲಾ ಮಕ್ಕಳು ಭಾಗವಹಿಸಿದ್ದರು. ಖ್ಯಾತ ಉರಗ ಸಂರಕ್ಷಕ ಸುರೇಶ್ ರಮೇಶ್ ಶಿಶಿಲ ಹಾಗೂ  ಅರಣ್ಯಾಧಿಕಾರಿ ಸಚಿನ್ ಉರಗಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ದಿನೇಶ್ ಹೊಳ್ಳ ಮಕ್ಕಳಿಗೆ ಪೇಪರ್ ಕ್ರಾಫ್ಟ್ ಅಕ್ಷರ ವಿನ್ಯಾಸದ ಬಗ್ಗೆ ಮಾಹಿತಿ ನೀಡಿ, ಮಿಮಿಕ್ರಿ, ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಿ ಮಕ್ಕಳನ್ನು ರಂಜಿಸಿದರು. ವಿಶೇಷವಾಗಿ ಪಶ್ಚಿಮ ಘಟ್ಟಗಳ ಮತ್ತು ಅದರಲ್ಲಿರುವ ಜೀವವೈವಿಧ್ಯಗಳ ಸಂರಕ್ಷಣೆಯ ವಿಚಾರದಲ್ಲಿ ಮಕ್ಕಳು ಏನು ಪ್ರಯತ್ನ ಮಾಡಬಹುದೆಂದು ಮನಮುಟ್ಟುವಂತೆ ವಿವರಿಸಿದರು.

ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರವಹಣಾ ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ ಸ್ವಯಂಸೇವಕರಾದ ಅವಿನಾಶ್ ಬಿಢೆ ಅರಸಿನಮಕ್ಕಿ ‌ಹಾಗೂ ರಮೇಶ್.ಬಿ.ಶಿಶಿಲ ಸಹಕಾರ ನೀಡಿದರು.ಹೊಸ್ತೋಟ ಮತ್ತು ಅರಸಿನಮಕ್ಕಿ ಶಾಲಾ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಮಾಲಾಡಿ: ಕೊಲ್ಪೆದಬೈಲು ಶಕ್ತಿನಗರ ನಿವಾಸಿ ಕುಂಞಿಮೋಣು ನಿಧನ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya
error: Content is protected !!