23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

ಅರಸಿನಮಕ್ಕಿ : ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಎ. 07 ರಂದು ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ‌ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇವೆರಡರ ಸಹಭಾಗಿತ್ವದಲ್ಲಿ ಒಂದು ದಿನದ ಬೇಸಿಗೆ ಶಿಬಿರವನ್ನು ಸಹ್ಯಾದ್ರಿ ಸಂಚಯದ ಕಾರ್ಯದರ್ಶಿ  ಅಂತರ್ ರಾಷ್ಟ್ರೀಯ ಖ್ಯಾತಿಯ ಕಲಾವಿದ ಹಾಗೂ ಪರಿಸರ ಪ್ರೇಮಿ ದಿನೇಶ್ ಹೊಳ್ಳ ಮಂಗಳೂರು ನಡೆಸಿಕೊಟ್ಟರು.

ಶಿಬಿರದಲ್ಲಿ ಹತ್ತಿರದ ಹೊಸ್ತೋಟ ಶಾಲಾ ಮಕ್ಕಳು ಭಾಗವಹಿಸಿದ್ದರು. ಖ್ಯಾತ ಉರಗ ಸಂರಕ್ಷಕ ಸುರೇಶ್ ರಮೇಶ್ ಶಿಶಿಲ ಹಾಗೂ  ಅರಣ್ಯಾಧಿಕಾರಿ ಸಚಿನ್ ಉರಗಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ದಿನೇಶ್ ಹೊಳ್ಳ ಮಕ್ಕಳಿಗೆ ಪೇಪರ್ ಕ್ರಾಫ್ಟ್ ಅಕ್ಷರ ವಿನ್ಯಾಸದ ಬಗ್ಗೆ ಮಾಹಿತಿ ನೀಡಿ, ಮಿಮಿಕ್ರಿ, ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡಿ ಮಕ್ಕಳನ್ನು ರಂಜಿಸಿದರು. ವಿಶೇಷವಾಗಿ ಪಶ್ಚಿಮ ಘಟ್ಟಗಳ ಮತ್ತು ಅದರಲ್ಲಿರುವ ಜೀವವೈವಿಧ್ಯಗಳ ಸಂರಕ್ಷಣೆಯ ವಿಚಾರದಲ್ಲಿ ಮಕ್ಕಳು ಏನು ಪ್ರಯತ್ನ ಮಾಡಬಹುದೆಂದು ಮನಮುಟ್ಟುವಂತೆ ವಿವರಿಸಿದರು.

ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರವಹಣಾ ಘಟಕದ ಸಂಯೋಜಕಿ ರಶ್ಮಿತಾ ಶಿಶಿಲ ಸ್ವಯಂಸೇವಕರಾದ ಅವಿನಾಶ್ ಬಿಢೆ ಅರಸಿನಮಕ್ಕಿ ‌ಹಾಗೂ ರಮೇಶ್.ಬಿ.ಶಿಶಿಲ ಸಹಕಾರ ನೀಡಿದರು.ಹೊಸ್ತೋಟ ಮತ್ತು ಅರಸಿನಮಕ್ಕಿ ಶಾಲಾ ಮುಖ್ಯ ಗುರುಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Related posts

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya
error: Content is protected !!