22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

ಉಜಿರೆ: ಅಭ್ಯಾಸ್ ಪದವಿ ಪೂರ್ವ ಕಾಲೇಜು ಉಜಿರೆ ಕಾಶಿಬೆಟ್ಟು ಪ್ರಗತಿನಗರ ಇದರ ವತಿಯಿಂದ ಅಭ್ಯಾಸ್ ಸ್ಪಾರ್ಕ್ ಶೀರ್ಷಿಕೆಯಡಿಯಲ್ಲಿ ಸೇತುಬಂಧ ಕಾರ್ಯಕ್ರಮ ಏ.6 ರಂದು ನಡೆಯಿತು.

ಸಂಸ್ಥೆಯ ಅಧ್ಯಕ್ಷ ಕಾರ್ತಿಕೇಯ ಉದ್ಘಾಟಿಸಿ ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿದರು. ಸಂಸ್ಥೆಯ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಹಾಗೂ ಪಿ.ಆರ್.ಓ ಧನಂಜಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಷಯವಾರು ಪರಿಣಿತ ಉಪನ್ಯಾಸಕರುಗಳು ವೇದಿಕೆಯಲ್ಲಿ ಆಸೀನರಾಗಿದ್ದರು. ಕಾಲೇಜಿನ ಉಪಪ್ರಾಂಶುಪಾಲರು ಪ್ರೊ. ಚಂದ್ರಶೇಖರ್ ಗೌಡ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ತಾವು ಆಯ್ಕೆ ಮಾಡುವ ವಿಷಯ ಹಾಗೂ ಮುಂದಿನ ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು. 80ಕ್ಕಿಂತ ಹೆಚ್ಚು ವಿದ್ಯಾರ್ಥಿ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಗುರುಪ್ರಸಾದ್ ಭಟ್ ಧನ್ಯವಾದ ನೀಡಿದರು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕಳೆಂಜ ಸಂತ ಸೆಬಾಸ್ಟಿಯನ್ ದೇವಾಲಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಚಾಲನೆ

Suddi Udaya
error: Content is protected !!