23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ನಡೆಯಿತು.

(ಎ. 08) ಇಂದು ಬೆಳಗ್ಗೆ ಉತ್ಸವ ಬಲಿ, ವಿಶೇಷ ಸುತ್ತುಗಳು, ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ, ಅಪ್ಪಂಗಾಯಿ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಂತರ ಪಲ್ಲಪೂಜೆ, ಆರಾಟಕ್ಕೆ ಕುದಿ ಕರೆಯುವುದು, ಪ್ರಸಾದ ವಿತರಣೆ, ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ 3.30 ರಿಂದ 5.30 ರ ವರೆಗೆ ವಿವಿಧ ಭಜನಾ ಮಂಡಳಿ ಗಳಿಂದ ಭಜನಾ ಸೇವೆ, ಸಂಜೆ 6.30 ರಿಂದ ತೇರ ಕಲಶ, ಉತ್ಸವ ಬಲಿ, ವಿಶೇಷ ಸುತ್ತುಗಳು, ನಂತರ ರಕ್ತೇಶ್ವರಿ ದೈವದ ನೇಮೋತ್ಸವ, ರಾತ್ರಿ 10.30 ಕ್ಕೆ ಶ್ರೀ ಸದಾಶಿವ ದೇವರ ರಥೋತ್ಸವ, ನಂತರ ರಕ್ತೇಶ್ವರಿ ದೈವದ ಸಹಿತ ಶ್ರೀ ದೇವರ ಮೂಲ ಕ್ಷೇತ್ರಕ್ಕೆ ಭೇಟಿ, ರಾತ್ರಿ 11.00 ಕ್ಕೆ ಶ್ರೀ ಕ್ಷೇತ್ರಕ್ಕೆ ದೇವರ ಆಗಮನ, ನಂತರ ಫಲಾಹಾರ ಮತ್ತು ಭೂತಬಲಿ, ನಂತರ ದೇವರ ಶಯನೋತ್ಸವ ಕಾರ್ಯಕ್ರಮ ಚೆಂಡೆನಾದನ, ಬ್ಯಾಂಡ್ ವಾಳಗ, ಸಿಡಿಮದ್ದು, ಜೇಂಕಾರದೊಂದಿಗೆ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮ ನಡೆಯಲಿದೆ.

Related posts

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!