25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ನಡೆಯಿತು.

(ಎ. 08) ಇಂದು ಬೆಳಗ್ಗೆ ಉತ್ಸವ ಬಲಿ, ವಿಶೇಷ ಸುತ್ತುಗಳು, ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ, ಅಪ್ಪಂಗಾಯಿ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಂತರ ಪಲ್ಲಪೂಜೆ, ಆರಾಟಕ್ಕೆ ಕುದಿ ಕರೆಯುವುದು, ಪ್ರಸಾದ ವಿತರಣೆ, ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ 3.30 ರಿಂದ 5.30 ರ ವರೆಗೆ ವಿವಿಧ ಭಜನಾ ಮಂಡಳಿ ಗಳಿಂದ ಭಜನಾ ಸೇವೆ, ಸಂಜೆ 6.30 ರಿಂದ ತೇರ ಕಲಶ, ಉತ್ಸವ ಬಲಿ, ವಿಶೇಷ ಸುತ್ತುಗಳು, ನಂತರ ರಕ್ತೇಶ್ವರಿ ದೈವದ ನೇಮೋತ್ಸವ, ರಾತ್ರಿ 10.30 ಕ್ಕೆ ಶ್ರೀ ಸದಾಶಿವ ದೇವರ ರಥೋತ್ಸವ, ನಂತರ ರಕ್ತೇಶ್ವರಿ ದೈವದ ಸಹಿತ ಶ್ರೀ ದೇವರ ಮೂಲ ಕ್ಷೇತ್ರಕ್ಕೆ ಭೇಟಿ, ರಾತ್ರಿ 11.00 ಕ್ಕೆ ಶ್ರೀ ಕ್ಷೇತ್ರಕ್ಕೆ ದೇವರ ಆಗಮನ, ನಂತರ ಫಲಾಹಾರ ಮತ್ತು ಭೂತಬಲಿ, ನಂತರ ದೇವರ ಶಯನೋತ್ಸವ ಕಾರ್ಯಕ್ರಮ ಚೆಂಡೆನಾದನ, ಬ್ಯಾಂಡ್ ವಾಳಗ, ಸಿಡಿಮದ್ದು, ಜೇಂಕಾರದೊಂದಿಗೆ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮ ನಡೆಯಲಿದೆ.

Related posts

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya
error: Content is protected !!