ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ನಡೆಯಿತು.
(ಎ. 08) ಇಂದು ಬೆಳಗ್ಗೆ ಉತ್ಸವ ಬಲಿ, ವಿಶೇಷ ಸುತ್ತುಗಳು, ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ, ಅಪ್ಪಂಗಾಯಿ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಂತರ ಪಲ್ಲಪೂಜೆ, ಆರಾಟಕ್ಕೆ ಕುದಿ ಕರೆಯುವುದು, ಪ್ರಸಾದ ವಿತರಣೆ, ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ 3.30 ರಿಂದ 5.30 ರ ವರೆಗೆ ವಿವಿಧ ಭಜನಾ ಮಂಡಳಿ ಗಳಿಂದ ಭಜನಾ ಸೇವೆ, ಸಂಜೆ 6.30 ರಿಂದ ತೇರ ಕಲಶ, ಉತ್ಸವ ಬಲಿ, ವಿಶೇಷ ಸುತ್ತುಗಳು, ನಂತರ ರಕ್ತೇಶ್ವರಿ ದೈವದ ನೇಮೋತ್ಸವ, ರಾತ್ರಿ 10.30 ಕ್ಕೆ ಶ್ರೀ ಸದಾಶಿವ ದೇವರ ರಥೋತ್ಸವ, ನಂತರ ರಕ್ತೇಶ್ವರಿ ದೈವದ ಸಹಿತ ಶ್ರೀ ದೇವರ ಮೂಲ ಕ್ಷೇತ್ರಕ್ಕೆ ಭೇಟಿ, ರಾತ್ರಿ 11.00 ಕ್ಕೆ ಶ್ರೀ ಕ್ಷೇತ್ರಕ್ಕೆ ದೇವರ ಆಗಮನ, ನಂತರ ಫಲಾಹಾರ ಮತ್ತು ಭೂತಬಲಿ, ನಂತರ ದೇವರ ಶಯನೋತ್ಸವ ಕಾರ್ಯಕ್ರಮ ಚೆಂಡೆನಾದನ, ಬ್ಯಾಂಡ್ ವಾಳಗ, ಸಿಡಿಮದ್ದು, ಜೇಂಕಾರದೊಂದಿಗೆ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮ ನಡೆಯಲಿದೆ.