August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ನಡೆಯಿತು.

(ಎ. 08) ಇಂದು ಬೆಳಗ್ಗೆ ಉತ್ಸವ ಬಲಿ, ವಿಶೇಷ ಸುತ್ತುಗಳು, ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ, ಅಪ್ಪಂಗಾಯಿ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಂತರ ಪಲ್ಲಪೂಜೆ, ಆರಾಟಕ್ಕೆ ಕುದಿ ಕರೆಯುವುದು, ಪ್ರಸಾದ ವಿತರಣೆ, ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ 3.30 ರಿಂದ 5.30 ರ ವರೆಗೆ ವಿವಿಧ ಭಜನಾ ಮಂಡಳಿ ಗಳಿಂದ ಭಜನಾ ಸೇವೆ, ಸಂಜೆ 6.30 ರಿಂದ ತೇರ ಕಲಶ, ಉತ್ಸವ ಬಲಿ, ವಿಶೇಷ ಸುತ್ತುಗಳು, ನಂತರ ರಕ್ತೇಶ್ವರಿ ದೈವದ ನೇಮೋತ್ಸವ, ರಾತ್ರಿ 10.30 ಕ್ಕೆ ಶ್ರೀ ಸದಾಶಿವ ದೇವರ ರಥೋತ್ಸವ, ನಂತರ ರಕ್ತೇಶ್ವರಿ ದೈವದ ಸಹಿತ ಶ್ರೀ ದೇವರ ಮೂಲ ಕ್ಷೇತ್ರಕ್ಕೆ ಭೇಟಿ, ರಾತ್ರಿ 11.00 ಕ್ಕೆ ಶ್ರೀ ಕ್ಷೇತ್ರಕ್ಕೆ ದೇವರ ಆಗಮನ, ನಂತರ ಫಲಾಹಾರ ಮತ್ತು ಭೂತಬಲಿ, ನಂತರ ದೇವರ ಶಯನೋತ್ಸವ ಕಾರ್ಯಕ್ರಮ ಚೆಂಡೆನಾದನ, ಬ್ಯಾಂಡ್ ವಾಳಗ, ಸಿಡಿಮದ್ದು, ಜೇಂಕಾರದೊಂದಿಗೆ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮ ನಡೆಯಲಿದೆ.

Related posts

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಎಸ್ ಡಿ ಯಂ ಆಂ.ಮಾ. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ನಡೆಯುವ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ ಬೆಲ್ಟ್ ಪ್ರಮೋಷನ್ ಪರೀಕ್ಷೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಟರ್ಮ್ ಇನ್ಶೂರೆನ್ಸ್ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya

ಮಾಚಾರು ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ  ವರ್ಷಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಬಿಡುಗಡೆ   

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya
error: Content is protected !!