25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

ಬಂದಾರು : ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧರ್ಮಸ್ಥಳ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಹಾಗೂ ಗೌರವಾಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯರವರ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತoತ್ರಿಯವರ ನೇತೃತ್ವದಲ್ಲಿ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ನಡೆಯಿತು.

(ಎ. 08) ಇಂದು ಬೆಳಗ್ಗೆ ಉತ್ಸವ ಬಲಿ, ವಿಶೇಷ ಸುತ್ತುಗಳು, ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ, ಅಪ್ಪಂಗಾಯಿ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಂತರ ಪಲ್ಲಪೂಜೆ, ಆರಾಟಕ್ಕೆ ಕುದಿ ಕರೆಯುವುದು, ಪ್ರಸಾದ ವಿತರಣೆ, ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ 3.30 ರಿಂದ 5.30 ರ ವರೆಗೆ ವಿವಿಧ ಭಜನಾ ಮಂಡಳಿ ಗಳಿಂದ ಭಜನಾ ಸೇವೆ, ಸಂಜೆ 6.30 ರಿಂದ ತೇರ ಕಲಶ, ಉತ್ಸವ ಬಲಿ, ವಿಶೇಷ ಸುತ್ತುಗಳು, ನಂತರ ರಕ್ತೇಶ್ವರಿ ದೈವದ ನೇಮೋತ್ಸವ, ರಾತ್ರಿ 10.30 ಕ್ಕೆ ಶ್ರೀ ಸದಾಶಿವ ದೇವರ ರಥೋತ್ಸವ, ನಂತರ ರಕ್ತೇಶ್ವರಿ ದೈವದ ಸಹಿತ ಶ್ರೀ ದೇವರ ಮೂಲ ಕ್ಷೇತ್ರಕ್ಕೆ ಭೇಟಿ, ರಾತ್ರಿ 11.00 ಕ್ಕೆ ಶ್ರೀ ಕ್ಷೇತ್ರಕ್ಕೆ ದೇವರ ಆಗಮನ, ನಂತರ ಫಲಾಹಾರ ಮತ್ತು ಭೂತಬಲಿ, ನಂತರ ದೇವರ ಶಯನೋತ್ಸವ ಕಾರ್ಯಕ್ರಮ ಚೆಂಡೆನಾದನ, ಬ್ಯಾಂಡ್ ವಾಳಗ, ಸಿಡಿಮದ್ದು, ಜೇಂಕಾರದೊಂದಿಗೆ ವಿವಿಧ ಧಾರ್ಮಿಕ, ವೈದಿಕ ಕಾರ್ಯಕ್ರಮ ನಡೆಯಲಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

Suddi Udaya
error: Content is protected !!