25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟ‌ರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ.

ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು ಅಂಗಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.

ಇಂದು ಬೆಳಗ್ಗೆ ಶಟರ್ ಮುರಿದಿರುವುದು ಸ್ಥಳೀಯರು ನೋಡಿ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಠಾಣೆಯ ಪ್ರಮೋದ್, ಕುಶಾಲಪ್ಪ ಯಂ. ಶಿವಾನಂದ, ಗಿರೀಶ್, ಸ್ಥಳಕ್ಕೆ ಆಗಮಿಸಿದ್ದು, ಸುತ್ತ ಮುತ್ತ ಹಾಗೂ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮರ ಪರಿಶೀಲನೆ ಮಾಡಿದ್ದಾರೆ. ಮಧ್ಯ ರಾತ್ರಿ ಸುಮಾರು 1 ರಿಂದ 2 ಗಂಟೆ ಸುಮಾರಿಗೆ, ಮೂವರು ಸೇರಿ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya
error: Content is protected !!