23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟ‌ರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ.

ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ ಅಂಗಡಿಗೆ ಮಧ್ಯರಾತ್ರಿ ಅಂಗಡಿಯ ಒಂದು ಬದಿಯ ಶಟರ್ ಮುರಿದು ಒಳ ಹೊಕ್ಕ ಕಳ್ಳರು ಅಂಗಡಿಯಲ್ಲಿದ್ದ ಹಣವನ್ನು ದೋಚಿದ್ದಾರೆ.

ಇಂದು ಬೆಳಗ್ಗೆ ಶಟರ್ ಮುರಿದಿರುವುದು ಸ್ಥಳೀಯರು ನೋಡಿ ಮಾಲಕರಿಗೆ ವಿಷಯ ತಿಳಿಸಿದ್ದು, ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಠಾಣೆಯ ಪ್ರಮೋದ್, ಕುಶಾಲಪ್ಪ ಯಂ. ಶಿವಾನಂದ, ಗಿರೀಶ್, ಸ್ಥಳಕ್ಕೆ ಆಗಮಿಸಿದ್ದು, ಸುತ್ತ ಮುತ್ತ ಹಾಗೂ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮರ ಪರಿಶೀಲನೆ ಮಾಡಿದ್ದಾರೆ. ಮಧ್ಯ ರಾತ್ರಿ ಸುಮಾರು 1 ರಿಂದ 2 ಗಂಟೆ ಸುಮಾರಿಗೆ, ಮೂವರು ಸೇರಿ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

Related posts

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ.ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಕನ್ಯಾಡಿ ಸೇವಾಭಾರತಿಯ ನೂತನ ಕಾರ್ಯಾಲಯದ ವಾಸ್ತುಪೂಜೆ ಹಾಗೂ ಪ್ರವೇಶ:

Suddi Udaya
error: Content is protected !!